ಚಾಮರಾಜನಗರ: ಕಳೆದ 2 ದಿನಗಳ ಹಿಂದೆ ಸ್ಮಶಾನವಿಲ್ಲದೆ ಗ್ರಾಂ.ಪಂ ಮುಂಭಾಗವೇ ಶವ ಸಂಸ್ಕಾರ ನೆರವೇರಿಸಿದ್ದ ಮಾಂಬಳ್ಳಿ ಗ್ರಾಮಸ್ಥರಿಗೆ ಕೂಡಲೇ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಾಂಬಳ್ಳಿ ಗ್ರಾಮಸ್ಥರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಸ್ಥರೇ ಸೂಚಿಸಿರುವ ಸರ್ವೇ ನಂ.೯೦೨ ರಲ್ಲಿ ಬರುವ ಸುಮಾರು ೩ ಎಕರೆ ಜಾಗಕ್ಕೆ ಸಂಬಂಧಿಸಿದ ಮಾಲೀಕರನ್ನು ಕರೆಸಿ ಅವರೊಂದಿಗೆ ಮಾತನಾಡಿ ಅವರು ಒಪ್ಪಿದ್ದಲ್ಲಿ ಜಿಲ್ಲಾಡಳಿತದಿಂದ ಖರೀದಿಸಿ ಸ್ಮಶಾನಕ್ಕಾಗಿ ಜಾಗವನ್ನು ಮೀಸಲಿಡಲಾಗುವುದು ಹಾಗೂ ಸೇತುವೆ ನಿರ್ಮಾಣಕ್ಕೂ ಕೂಡಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಮಾತನಾಡಿ ಮೊನ್ನೆ ನಡೆದ ಘಟನೆ ಅಚಾತುರ್ಯದಿಂದಾಗಿ ನಡೆಯಿತು ಹೆಣ ಇಟ್ಟು ೨ ದಿವಸ ಆಗಿತ್ತು ಆಗಾಗಿ ಏನು ಮಾಡಲು ಸಾಧ್ಯವಾಗಲಿಲ್ಲ. ಗ್ರಾಮದ ರುದ್ರಭೂಮಿ ಸಮಕ್ಷಮ ಸಮಿತಿ ವತಿಯಿಂದ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ.
ಗ್ರಾಮದಲ್ಲಿ ಜಮೀನು ಇಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, ಪರಿಶಿಷ್ಟರ ಸಂಖ್ಯೆ ಹೆಚ್ಚಾಗಿದ್ದು ಗ್ರಾಮದ ಜ್ವಲಂತ ಸಮಸ್ಯೆಯಾದ ಸ್ಮಶಾನಕ್ಕೆ ಸೂಕ್ತ ಪರಿಹಾರ ನೀಡಬೇಕಾಗಿದೆ ಎಂದು ಮನವಿ ಮಾಡಿದರು.
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಮಾತನಾಡಿ ವಿಷಯವನ್ನು ಒಂದು ಹಂತಕ್ಕೆ ತಂದಿದ್ದೇವೆ, ಜಾಗವನ್ನು ಖರೀದಿಸುವಂತೆ ಕೇಳಿದ್ದೀರಿ ಮಾಲೀಕರೊಂದಿಗೆ ಕೂಡಲೇ ಮಾತನಾಡಿ ಈ ಗೊಂದಲಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಎಸ್.ಶಿವಕುಮಾರ್, ಆರ್. ಎಎಸ್ಪಿ ಸುಂದರ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…