ಚಾಮರಾಜನಗರ: ಕಳೆದ 2 ದಿನಗಳ ಹಿಂದೆ ಸ್ಮಶಾನವಿಲ್ಲದೆ ಗ್ರಾಂ.ಪಂ ಮುಂಭಾಗವೇ ಶವ ಸಂಸ್ಕಾರ ನೆರವೇರಿಸಿದ್ದ ಮಾಂಬಳ್ಳಿ ಗ್ರಾಮಸ್ಥರಿಗೆ ಕೂಡಲೇ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಾಂಬಳ್ಳಿ ಗ್ರಾಮಸ್ಥರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಸ್ಥರೇ ಸೂಚಿಸಿರುವ ಸರ್ವೇ ನಂ.೯೦೨ ರಲ್ಲಿ ಬರುವ ಸುಮಾರು ೩ ಎಕರೆ ಜಾಗಕ್ಕೆ ಸಂಬಂಧಿಸಿದ ಮಾಲೀಕರನ್ನು ಕರೆಸಿ ಅವರೊಂದಿಗೆ ಮಾತನಾಡಿ ಅವರು ಒಪ್ಪಿದ್ದಲ್ಲಿ ಜಿಲ್ಲಾಡಳಿತದಿಂದ ಖರೀದಿಸಿ ಸ್ಮಶಾನಕ್ಕಾಗಿ ಜಾಗವನ್ನು ಮೀಸಲಿಡಲಾಗುವುದು ಹಾಗೂ ಸೇತುವೆ ನಿರ್ಮಾಣಕ್ಕೂ ಕೂಡಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಮಾತನಾಡಿ ಮೊನ್ನೆ ನಡೆದ ಘಟನೆ ಅಚಾತುರ್ಯದಿಂದಾಗಿ ನಡೆಯಿತು ಹೆಣ ಇಟ್ಟು ೨ ದಿವಸ ಆಗಿತ್ತು ಆಗಾಗಿ ಏನು ಮಾಡಲು ಸಾಧ್ಯವಾಗಲಿಲ್ಲ. ಗ್ರಾಮದ ರುದ್ರಭೂಮಿ ಸಮಕ್ಷಮ ಸಮಿತಿ ವತಿಯಿಂದ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ.
ಗ್ರಾಮದಲ್ಲಿ ಜಮೀನು ಇಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, ಪರಿಶಿಷ್ಟರ ಸಂಖ್ಯೆ ಹೆಚ್ಚಾಗಿದ್ದು ಗ್ರಾಮದ ಜ್ವಲಂತ ಸಮಸ್ಯೆಯಾದ ಸ್ಮಶಾನಕ್ಕೆ ಸೂಕ್ತ ಪರಿಹಾರ ನೀಡಬೇಕಾಗಿದೆ ಎಂದು ಮನವಿ ಮಾಡಿದರು.
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಮಾತನಾಡಿ ವಿಷಯವನ್ನು ಒಂದು ಹಂತಕ್ಕೆ ತಂದಿದ್ದೇವೆ, ಜಾಗವನ್ನು ಖರೀದಿಸುವಂತೆ ಕೇಳಿದ್ದೀರಿ ಮಾಲೀಕರೊಂದಿಗೆ ಕೂಡಲೇ ಮಾತನಾಡಿ ಈ ಗೊಂದಲಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಎಸ್.ಶಿವಕುಮಾರ್, ಆರ್. ಎಎಸ್ಪಿ ಸುಂದರ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…