ಜಿಲ್ಲೆಗಳು

ಚಾ.ನಗರ : ಬೆಳಗಿನ ಸಮಯ ರೈಲು ಸೇವೆ ಒದಗಿಸಲು ಸಾರ್ವಜನಿಕರ ಆಗ್ರಹ

ಚಾಮರಾಜನಗರ: ನಗರದಿಂದ ಮೈಸೂರಿಗೆ ಪ್ರತಿ ದಿನ ಆರು ರೈಲುಗಳು ಸಂಚರಿಸುತ್ತಿದ್ದು, ಈ ಪೈಕಿ ನಾಲ್ಕು ರೈಲುಗಳು ಸಂಜೆ 5.30ರ ನಂತರ ಸಾಂಸ್ಕೃತಿಕ ನಗರಿಗೆ ತೆರಳುತ್ತವೆ.

ಬೆಳಿಗ್ಗೆ 7.15ಕ್ಕೆ ಮೊದಲ ಪ್ಯಾಸೆಂಜರ್‌ ರೈಲು ಮೈಸೂರಿಗೆ ತೆರಳಿದರೆ, ನಂತರದ ರೈಲಿಗಾಗಿ ಮಧ್ಯಾಹ್ನ 3.30ರವರೆಗೆ ಕಾಯಬೇಕು. ಬೆಳಗಿನ ಅವಧಿಯಲ್ಲಿ ನಗರದಿಂದ ಇನ್ನೂ ಎರಡು ಮೂರು ರೈಲು ಸೇವೆ ಒದಗಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ‘ಸಂಜೆ ಹಾಗೂ ರಾತ್ರಿ ಮೈಸೂರಿಗೆ ರೈಲುಗಳಿದ್ದರೂ ಜಿಲ್ಲೆಯ ಜನರಿಗೆ ಉಪಯೋಗವಿಲ್ಲ. ಬೆಳಗಿನ ಹೊತ್ತು ಸಂಚರಿಸಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ’ ಎಂಬುದು ಅವರ ಅಭಿಪ್ರಾಯ.

‌ಆರು ರೈಲು: ಈಗ ಪ್ರತಿದಿನ ಬೆಳಿಗ್ಗೆ 7.15 (ಪ್ಯಾಸೆಂಜರ್‌), ಮಧ್ಯಾಹ್ನ 3.30 (ತಿರುಪತಿ ಎಕ್ಸ್‌ಪ್ರೆಸ್‌), ಸಂಜೆ 5.25 (ಪ್ಯಾಸೆಂಜರ್‌), 6.35 (ಎಕ್ಸ್‌ಪ್ರೆಸ್‌), ರಾತ್ರಿ 8.45 (ಎಕ್ಸ್‌ಪ್ರೆಸ್‌– ಇದು ಹೊಸ ರೈಲು. 10 ದಿನಗಳ ಹಿಂದೆಯಷ್ಟೇ ಆರಂಭವಾಗಿದೆ) ಹಾಗೂ ರಾತ್ರಿ 9.30ಕ್ಕೆ (ಪ್ಯಾಸೆಂಜರ್‌) ನಗರದಿಂದ ಮೈಸೂರಿಗೆ ರೈಲುಗಳಿವೆ.  ಬೆಳಿಗ್ಗೆ 7.15ರ ರೈಲಿಗೆ ಬೇಡಿಕೆ ಹೆಚ್ಚಿದ್ದು, ಭಾರಿ ಸಂಖ್ಯೆಯಲ್ಲಿ ಕಾರ್ಮಿಕರು, ಉದ್ಯೋಗಿಗಳು ಹಾಗೂ ಜನರು ಮೈಸೂರಿಗೆ ತೆರಳುತ್ತಾರೆ. ಒಂದೊಂದು ಭೋಗಿಯಲ್ಲಿ ಕನಿಷ್ಠ ಎಂದರೂ 200 ಜನರಷ್ಟು ಇರುತ್ತಾರೆ. ರೈಲಿನಲ್ಲಿ 10 ಬೋಗಿಗಳಿದ್ದು, ಎಲ್ಲವೂ ಭರ್ತಿಯಾಗುತ್ತದೆ. ‌

ಮಧ್ಯಾಹ್ನ 3.30ರ ತಿರುಪತಿ ರೈಲಿನಲ್ಲೂ ಪ್ರಯಾಣಿಕರಿರುತ್ತಾರೆ. ಸಂಜೆ 5.50ರ ರೈಲಿಗೂ ಜನರಿಂದ ಬೇಡಿಕೆ ಇದೆ. ಆದರೆ, ಆ ಬಳಿಕ ಸಂಚರಿಸುವ ರೈಲುಗಳಿಗೆ ಹತ್ತುವವರು ಬೆರಳೆಣಿಕೆಯಷ್ಟು ಮಂದಿ ಮಾತ್ರ.  ‘ಬೆಳಿಗ್ಗೆ 7.15ರ ನಂತರ ಮಧ್ಯಾಹ್ನ 3.30ರವರೆಗೂ ಒಂದೂ ರೈಲಿಲ್ಲ. ಬೆಳಿಗ್ಗೆ 8 ಗಂಟೆಯ ನಂತರ ನಗರದಿಂದ ಮೈಸೂರಿಗೆ ಹೋಗುವವರು ನೂರಾರು ಸಂಖ್ಯೆಯಲ್ಲಿದ್ದಾರೆ. 10ರ ಬಳಿಕ ಹೋಗುವವರೂ ಇದ್ದಾರೆ. ಅಂತಹವರಿಗೆ ರೈಲೇ ಇಲ್ಲ. ರೈಲಿಗೆ ಹೋಗುತ್ತೇವೆ ಎಂದರೆ ತಿರುಪತಿ ಎಕ್ಸ್‌ಪ್ರೆಸ್‌ವರೆಗೂ ಕಾಯಬೇಕು. ಇಲ್ಲದಿದ್ದರೆ ₹71 ಖರ್ಚು ಮಾಡಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಹೋಗಬೇಕಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸಿ.ಎಂ.ಕೃಷ್ಣಮೂರ್ತಿ ಅವರು ಹೇಳಿದ್ದಾರೆ.

‘ಬೆಳಗಿನ ಅವಧಿಯಲ್ಲಿ ನಗರದಿಂದ ಮೈಸೂರಿಗೆ ರೈಲಿದ್ದರೆ ಜನಸಾಮಾನ್ಯರಿಗೆ ಹೆಚ್ಚು ಪ್ರಯೋಜನವಾಗುತ್ತದೆ. ಪ್ಯಾಸೆಂಜರ್‌ ರೈಲಿಗೆ ₹20 ಕೊಟ್ಟರೆ ಸಾಕು. ಎಕ್ಸ್‌ಪ್ರೆಸ್‌ ಆದರೆ ₹40 ಕೊಡಬೇಕು. ಹಾಗಿದ್ದರೂ, ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ಗಿಂದ ₹30 ಉಳಿತಾಯವಾಗುತ್ತದೆ’ ಎಂಬುದು ಜನರ ಅನಿಸಿಕೆಯಾಗಿದೆ.

 

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago