ಜಿಲ್ಲೆಗಳು

ಚಾ.ನಗರದಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟನೆ

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ನಿರಂತರವಾಗಿ ನಡೆದು ಜನರ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಇನ್ನೇರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸ್, ಪ್ರಯೋಗಾಲಯ ತಂತ್ರಜ್ಞ, ತಾಂತ್ರಿಕ ಸಿಬ್ಬಂದಿ ನೇಮಿಸಿದ್ದು, ಔಷಧ ವಿತರಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧ ಜನರಿಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮುಖ್ಯಮಂತ್ರಿ ಅವರು ಸ್ಥಳೀಯ ವಾಸಿ ಸುಧಾ ಎಂಬಾಕೆಯೊಂದಿಗೆ ಮಾತನಾಡಿ, ನೀವು ಕ್ಲಿನಿಕ್ ಹತ್ತಿರ ಇದ್ದಿರಾ, ನಿಮ್ಮದು ಯಾವ ಏರಿಯಾ, ಈ ಮೊದಲು ಇಂತಹ ಕ್ಲಿನಿಕ್ ಇತ್ತೇನು, ಇದರಿಂದ ಅನುಕೂಲ ಆಗಲಿದೆಯೇ ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾ ಅವರು, ಕ್ಲಿನಿಕ್ ತೆರೆದಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದರು. ಕ್ಲಿನಿಕ್‌ನಲ್ಲಿ ಉಚಿತವಾಗಿ ಚಿಕಿತ್ಸೆ ದೊರಕಲಿದೆ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಆಶಾ, ಸದಸ್ಯ ಮನೋಜ್‌ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಮಮತಾ ಇತರರಿದ್ದರು.

ನಮ್ಮ ಕ್ಲಿನಿಕ್‌ನಲ್ಲಿ ೧೨ ಸೇವೆ

ತಾಯಿ ಆರೋಗ್ಯ ನಿರ್ವಹಣೆ.
ಬಾಣಂತಿ ಹಾಗೂ ಚುಚ್ಚುಮದ್ದು ಸೇವೆ
ನವಜಾತ ಶಿಶುಗಳ ಆರೈಕೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿರ್ವಹಣೆ.
ಹಿರಿಯ ನಾಗರೀಕರ ಅಂತಿಮ ಹಂತದ ಆರೋಗ್ಯ ಪಾಲನೆ.
ಕಣ್ಣು ಹಾಗೂ ದಂತ ತಪಾಸಣೆ, ಚಿಕಿತ್ಸೆ.
ತುರ್ತು ವೈದ್ಯಕೀಯ ಸೇವೆ.
ಮಾನಸಿಕ ಆರೋಗ್ಯ ಸೇವೆ

ಯರ‍್ಯಾರು ಇರಲಿದ್ದಾರೆ:

ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿ, ಪ್ರಯೋಗಾಲಯ ತಂತ್ರಜ್ಞ, ಫಾರ್ಮಾಸಿಸ್ಟ್, ನರ್ಸ್, ಕಿರಿಯ ದರ್ಜೆ ಸಹಾಯಕರಿದ್ದು, ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ಬೆಳಗ್ಗೆ ೯.೩೦ ರಿಂದ ಸಂಜೆ ೬.೩೦ ಗಂಟೆ ತನಕ ಸೇವೆ ದೊರಕಲಿದೆ.
ವೈದ್ಯರ, ಪ್ರಯೋಗಾಲಯ ತಂತ್ರಜ್ಞ , ಚುಚ್ಚುಮದ್ದು ನೀಡಿಕೆ, ಕಿರಿಯ ದರ್ಜೆ ಸಹಾಯಕರ ಕೊಠಡಿಗಳಿದ್ದು, ನಿರೀಕ್ಷಣಾ ಸ್ಥಳ ಮತ್ತು ಶೌಚಗೃಹದ ಸೌಲಭ್ಯವಿದೆ.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago