ಜಿಲ್ಲೆಗಳು

ಚಾ.ನಗರದಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟನೆ

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ನಿರಂತರವಾಗಿ ನಡೆದು ಜನರ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಇನ್ನೇರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರು, ನರ್ಸ್, ಪ್ರಯೋಗಾಲಯ ತಂತ್ರಜ್ಞ, ತಾಂತ್ರಿಕ ಸಿಬ್ಬಂದಿ ನೇಮಿಸಿದ್ದು, ಔಷಧ ವಿತರಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧ ಜನರಿಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮುಖ್ಯಮಂತ್ರಿ ಅವರು ಸ್ಥಳೀಯ ವಾಸಿ ಸುಧಾ ಎಂಬಾಕೆಯೊಂದಿಗೆ ಮಾತನಾಡಿ, ನೀವು ಕ್ಲಿನಿಕ್ ಹತ್ತಿರ ಇದ್ದಿರಾ, ನಿಮ್ಮದು ಯಾವ ಏರಿಯಾ, ಈ ಮೊದಲು ಇಂತಹ ಕ್ಲಿನಿಕ್ ಇತ್ತೇನು, ಇದರಿಂದ ಅನುಕೂಲ ಆಗಲಿದೆಯೇ ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾ ಅವರು, ಕ್ಲಿನಿಕ್ ತೆರೆದಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದರು. ಕ್ಲಿನಿಕ್‌ನಲ್ಲಿ ಉಚಿತವಾಗಿ ಚಿಕಿತ್ಸೆ ದೊರಕಲಿದೆ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಆಶಾ, ಸದಸ್ಯ ಮನೋಜ್‌ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಮಮತಾ ಇತರರಿದ್ದರು.

ನಮ್ಮ ಕ್ಲಿನಿಕ್‌ನಲ್ಲಿ ೧೨ ಸೇವೆ

ತಾಯಿ ಆರೋಗ್ಯ ನಿರ್ವಹಣೆ.
ಬಾಣಂತಿ ಹಾಗೂ ಚುಚ್ಚುಮದ್ದು ಸೇವೆ
ನವಜಾತ ಶಿಶುಗಳ ಆರೈಕೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿರ್ವಹಣೆ.
ಹಿರಿಯ ನಾಗರೀಕರ ಅಂತಿಮ ಹಂತದ ಆರೋಗ್ಯ ಪಾಲನೆ.
ಕಣ್ಣು ಹಾಗೂ ದಂತ ತಪಾಸಣೆ, ಚಿಕಿತ್ಸೆ.
ತುರ್ತು ವೈದ್ಯಕೀಯ ಸೇವೆ.
ಮಾನಸಿಕ ಆರೋಗ್ಯ ಸೇವೆ

ಯರ‍್ಯಾರು ಇರಲಿದ್ದಾರೆ:

ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿ, ಪ್ರಯೋಗಾಲಯ ತಂತ್ರಜ್ಞ, ಫಾರ್ಮಾಸಿಸ್ಟ್, ನರ್ಸ್, ಕಿರಿಯ ದರ್ಜೆ ಸಹಾಯಕರಿದ್ದು, ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ಬೆಳಗ್ಗೆ ೯.೩೦ ರಿಂದ ಸಂಜೆ ೬.೩೦ ಗಂಟೆ ತನಕ ಸೇವೆ ದೊರಕಲಿದೆ.
ವೈದ್ಯರ, ಪ್ರಯೋಗಾಲಯ ತಂತ್ರಜ್ಞ , ಚುಚ್ಚುಮದ್ದು ನೀಡಿಕೆ, ಕಿರಿಯ ದರ್ಜೆ ಸಹಾಯಕರ ಕೊಠಡಿಗಳಿದ್ದು, ನಿರೀಕ್ಷಣಾ ಸ್ಥಳ ಮತ್ತು ಶೌಚಗೃಹದ ಸೌಲಭ್ಯವಿದೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago