ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ನಿರಂತರವಾಗಿ ನಡೆದು ಜನರ ಸೇವೆಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಎಲ್ಲೆಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ. ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ನಗರದ ಕರಿನಂಜನಪುರ ಬಡಾವಣೆ ಹಾಗೂ ಗುಂಡ್ಲುಪೇಟೆಯಲ್ಲಿ ಪ್ರಾರಂಭಿಸಲಾಗಿದೆ. ಕೊಳ್ಳೇಗಾಲದಲ್ಲಿ ಇನ್ನೇರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ನಮ್ಮ ಕ್ಲಿನಿಕ್ನಲ್ಲಿ ವೈದ್ಯರು, ನರ್ಸ್, ಪ್ರಯೋಗಾಲಯ ತಂತ್ರಜ್ಞ, ತಾಂತ್ರಿಕ ಸಿಬ್ಬಂದಿ ನೇಮಿಸಿದ್ದು, ಔಷಧ ವಿತರಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧ ಜನರಿಗೆ ಅರಿವು ಮೂಡಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಳಿಕ ಮುಖ್ಯಮಂತ್ರಿ ಅವರು ಸ್ಥಳೀಯ ವಾಸಿ ಸುಧಾ ಎಂಬಾಕೆಯೊಂದಿಗೆ ಮಾತನಾಡಿ, ನೀವು ಕ್ಲಿನಿಕ್ ಹತ್ತಿರ ಇದ್ದಿರಾ, ನಿಮ್ಮದು ಯಾವ ಏರಿಯಾ, ಈ ಮೊದಲು ಇಂತಹ ಕ್ಲಿನಿಕ್ ಇತ್ತೇನು, ಇದರಿಂದ ಅನುಕೂಲ ಆಗಲಿದೆಯೇ ? ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಧಾ ಅವರು, ಕ್ಲಿನಿಕ್ ತೆರೆದಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದರು. ಕ್ಲಿನಿಕ್ನಲ್ಲಿ ಉಚಿತವಾಗಿ ಚಿಕಿತ್ಸೆ ದೊರಕಲಿದೆ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಆಶಾ, ಸದಸ್ಯ ಮನೋಜ್ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಮಮತಾ ಇತರರಿದ್ದರು.
ನಮ್ಮ ಕ್ಲಿನಿಕ್ನಲ್ಲಿ ೧೨ ಸೇವೆ
ತಾಯಿ ಆರೋಗ್ಯ ನಿರ್ವಹಣೆ.
ಬಾಣಂತಿ ಹಾಗೂ ಚುಚ್ಚುಮದ್ದು ಸೇವೆ
ನವಜಾತ ಶಿಶುಗಳ ಆರೈಕೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿರ್ವಹಣೆ.
ಹಿರಿಯ ನಾಗರೀಕರ ಅಂತಿಮ ಹಂತದ ಆರೋಗ್ಯ ಪಾಲನೆ.
ಕಣ್ಣು ಹಾಗೂ ದಂತ ತಪಾಸಣೆ, ಚಿಕಿತ್ಸೆ.
ತುರ್ತು ವೈದ್ಯಕೀಯ ಸೇವೆ.
ಮಾನಸಿಕ ಆರೋಗ್ಯ ಸೇವೆ
ಯರ್ಯಾರು ಇರಲಿದ್ದಾರೆ:
ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿ, ಪ್ರಯೋಗಾಲಯ ತಂತ್ರಜ್ಞ, ಫಾರ್ಮಾಸಿಸ್ಟ್, ನರ್ಸ್, ಕಿರಿಯ ದರ್ಜೆ ಸಹಾಯಕರಿದ್ದು, ಭಾನುವಾರ ಹೊರತುಪಡಿಸಿ ಇತರೆ ದಿನಗಳಲ್ಲಿ ಬೆಳಗ್ಗೆ ೯.೩೦ ರಿಂದ ಸಂಜೆ ೬.೩೦ ಗಂಟೆ ತನಕ ಸೇವೆ ದೊರಕಲಿದೆ.
ವೈದ್ಯರ, ಪ್ರಯೋಗಾಲಯ ತಂತ್ರಜ್ಞ , ಚುಚ್ಚುಮದ್ದು ನೀಡಿಕೆ, ಕಿರಿಯ ದರ್ಜೆ ಸಹಾಯಕರ ಕೊಠಡಿಗಳಿದ್ದು, ನಿರೀಕ್ಷಣಾ ಸ್ಥಳ ಮತ್ತು ಶೌಚಗೃಹದ ಸೌಲಭ್ಯವಿದೆ.
ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ…
ಎಚ್.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್ಆರ್ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…
50ಕ್ಕೂ ಹೆಚ್ಚು ಸ್ಟಿಂಗ್ ಆಪರೇಷನ್ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…