ಜಿಲ್ಲೆಗಳು

ಚಾ. ನಗರ ಹಳೆ ಜಿಲ್ಲಾಸ್ಪತ್ರೆ : ಇಂದಿನಿಂದ ಹೊರ ರೋಗಿಗಳ ಸೇವೆ ಆರಂಭ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಹಳೆ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಆಡಳಿತ ಸೋಮವಾರದಿಂದ ಹೊರರೋಗಿ ವಿಭಾಗಗಳನ್ನು ಪುನಾರಂಭಿಸಲಿದೆ.

ಕಳೆದ ಅಕ್ಟೋಬರ್‌ನಲ್ಲಿ ನಗರದ ಹೊರವಲಯದ ಯಡಬೆಟ್ಟದಲ್ಲಿ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನೆ ಆದ ಬಳಿಕ ಹಳೆ ಜಿಲ್ಲಾಸ್ಪತ್ರೆಯಲ್ಲಿದ್ದ ಹೆರಿಗೆ ಮತ್ತು ಮಕ್ಕಳ ವಿಭಾಗಗಳು, ಸ್ಕ್ಯಾನಿಂಗ್ ಕೇಂದ್ರವನ್ನು ಬಿಟ್ಟು ಉಳಿದೆಲ್ಲಾ ವಿಭಾಗಗಳನ್ನು ಯಡಬೆಟ್ಟದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ನಂತರ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಿಲಾಗಿತ್ತು. ಕೊರೊನಾ ಕಡಿಮೆಯಾದ ನಂತರ ಕಟ್ಟಡ ಖಾಲಿ ಬಿದ್ದಿತ್ತು. ಆಸ್ಪತ್ರೆ ಸ್ಥಳಾಂತರ ಆದ ಬಳಿಕ ಹಳೆ ಜಿಲ್ಲಾಸ್ಪತ್ರೆಯಲ್ಲಿ ಮೊದಲಿನಂತೆ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಹಲವು ಸಂಘಟನೆಗಳು ಪ್ರತಿಭಟನೆಯನ್ನೂ ಮಾಡಿದ್ದವು.
ನಗರದಿಂದ ೭ ಕಿ.ಮೀ ದೂರದಲ್ಲಿರುವ ಯಡಬೆಟ್ಟಕ್ಕೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಹೋಗುವ ಅನಿವಾರ್ಯತೆ ಬಗ್ಗೆ ರೋಗಿಗಳು ಅಳಲು ತೋಡಿಕೊಂಡಿದ್ದರು. ಆಗಾಗ ಮಾಧ್ಯಮಗಳು ಕೂಡ ಈ ಬಗ್ಗೆ ಬೆಳಕು ಚೆಲ್ಲಿದ್ದವು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಳೆ, ಪ್ರವಾಹ ಹಾನಿ ಸಂಬಂಧ ನಡೆಸಿದ್ದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಆರಂಭಿಸಲು ಸಿಮ್ಸ್ ಡೀನ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು.
ಸಚಿವರ ಸೂಚನೆಯಂತೆ ಹೊರ ರೋಗಿಗಳ ವಿಭಾಗ ಆರಂಭವಾಗಲಿದೆೆ. ಕೆಲವು ದಿನಗಳ ನಂತರ ತುರ್ತು ಚಿಕಿತ್ಸಾ ವಿಭಾಗವನ್ನೂ ತೆರೆಯಲಾಗುವುದು ಎಂದು ಜಿಲ್ಲಾ ಸರ್ಜನ್ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

21 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

23 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

26 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago