ಚಾಮರಾಜನಗರ : ನಗರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರು ಜೊತೆಗಿರುವ ಗಣೇಶನ ಮೂರ್ತಿ ಒಂದೇ ಒಂದು ಲಭ್ಯವಿದ್ದು ಸಾಕಷ್ಟು ಯುವಕರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಗಣಪತಿ ಮಾರಾಟಕ್ಕಾಗಿ ಹಾಕಿರುವ ಸ್ಟಾಲ್ ನಲ್ಲಿ ವಿವಿಧ ಭಂಗಿಯ ಮಣ್ಣಿನ ಗಣೇಶನ ಮೂರ್ತಿಗಳ ಮಾರಾಟ ಜೋರಾಗಿದ್ದು ಗಣೇಶನ ಜೊತೆಗೆ ಇರುವ ಡಾ.ಪುನೀತ್ ರಾಜ್ ಕುಮಾರ್ ಅವರ ಮೂರ್ತಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸುಮಾರು ೧೧-೧೨ ಸಾವಿರ ರೂಪಾಯಿ ಬೆಲೆಬಾಳುವ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಸದ್ಯಕ್ಕೆ ಒಂದು ಮಾತ್ರ ಲಭ್ಯವಿದ್ದು ಮಾರಾಟವಾದರೆ ಇಂದು ಸಂಜೆಯೊತ್ತಿಗೆ ಇನ್ನಷ್ಟು ತರಿಸುವ ಯೋಜನೆ ಮಾಡಲಾಗುವುದು ಎಂದು ಮಾರಾಟಗಾರರಾದ ವಿನಯ್ ಕುಮಾರ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಚೂರು ವ್ಯಾಪಾರಕ್ಕೆ ತೊಡಕು ಉಂಟಾಯಿತು, ಪುನೀತ್ ಜೊತೆಯಾಗಿರುವ ಗಣೇಶನ ಮೂರ್ತಿಗೆ ಬೇಡಿಕೆ ಹೆಚ್ಚಾಗಿದ್ದು ಮಾರಾಟವಾದ ನಂತರ ಮತ್ತಷ್ಟು ತರಿಸುತ್ತೇವೆ ಎಂದು ಮಾರಾಟಗಾರ ವಿನಯ್ ಕುಮಾರ್ ತಿಳಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…