ಜಿಲ್ಲೆಗಳು

ಚಾ.ನಗರ: ಪಟಾಕಿ ಶಬ್ದ ಹಿಂದಿಗಿಂತ 8 ಡೆಸಿಬಲ್ ಜಾಸ್ತಿ!

ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು….

ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ!
ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು ಈ ಪೈಕಿ ನರಕ ಚತುರ್ದಶಿಯಂದು(ಅ.೨೪)ಪಟಾಕಿ ಆರ್ಭಟ ಜೋರಾಗಿ ಆ ದಿನ ಶಬ್ದಮಾಲಿನ್ಯ ಪ್ರಮಾಣ ೭೧.೫ಡೆಸಿಬಲ್ ದಾಖಲಾಗಿದೆ.

ಹಬ್ಬದ ೨ನೇ ದಿನವಾದ ಅ.೨೫ರ ಅಮಾವಾಸ್ಯೆಯಂದು ಸೂರ್ಯಗ್ರಹಣ ಇದ್ದ ಕಾರಣದಿಂದಲೋ ಏನೋ ಪಟಾಕಿ ಸದ್ದು ಅಷ್ಟಾಗಿ ಮೊಳಗಿಲ್ಲ. ಹೀಗಾಗಿ ಆ ದಿನ ೬೧.೭ಡೆಸಿಬಲ್
ಶಬ್ದವಿತ್ತು. ಇದು ದೀಪಾವಳಿಗೆ ಮುಂಚಿನ (ಅ.೧೮) ಶಬ್ದಮಾಲಿನ್ಯಕ್ಕೆ ಸಮನಾಗಿದೆ.
ಇನ್ನು ಬಲಿಪಾಡ್ಯಮಿಯಂದು ಶಬ್ದಮಾಲಿನ್ಯ ಸರಾಸರಿ
೬೬.೧ಡೆಸಿಬಲ್ ಕಂಡುಬoದಿದೆ. ಈ ಪ್ರಕಾರ ಬಲಿಪಾಡ್ಯಮಿಗಿಂತ ನರಕಚತುರ್ದಶಿಯಂದೇ
ಪಟಾಕಿ ಮೊರೆತ ಹೆಚ್ಚಾಗಿರುವುದು ಗಮನಾರ್ಹ.

ಕಳೆದ ವರ್ಷ ಬಲಿಪಾಡ್ಯಮಿ ನ.೩ರಂದು ನಡೆದಿತ್ತು. ಆಗ ಶಬ್ದಮಾಲಿನ್ಯ ೫೮.೦೪ ಡೆಸಿಬಲ್ ದಾಖಲಾಗಿತ್ತು. ಆವಾಗ ಕೋವಿಡ್ ಹಿನ್ನೆಲೆಯಲ್ಲಿ ಪಟಾಕಿ ಬಳಕೆ ಕಡಿಮೆ ಕಾರಣ ದೀಪಾವಳಿಗೆ ಮುಂಚಿನ ಶಬ್ದಮಾಲಿನ್ಯಕ್ಕಿಂತ  ೧.೧೦ಡೆಸಿಬಲ್ನಷ್ಟು ಶಬ್ದಮಾಲಿನ್ಯ ಮಾತ್ರ ಜಾಸ್ತಿಕಂಡುಬoದಿತ್ತು.
ಕರ್ನಾಟಕ ರಾಜ್ಯಮಾಲಿನ್ಯ
ನಿಯಂತ್ರಣಮoಡಳಿ ಕಚೇರಿ ಚಾ.ನಗರದ ವಾಣಿಯಾರ್ ಸ್ಟಿoಟ್ ಎಸ್ಪಿಎಸ್ ಕಾಂಪ್ಲೆಕ್ಸ್ನಲ್ಲಿ
ಕಾರ್ಯನಿರ್ವಹಿಸುತ್ತಿದ್ದು ಇಲ್ಲಿ ಸಂಜೆ ೬ರಿಂದ ರಾತ್ರಿ ೧೨ರ ತನಕ ದೀಪಾವಳಿ ಸಂದರ್ಭ ಶಬ್ದದ ಗುಣಮಟ್ಟ ಮಾಪನಯಂತ್ರ ಇರಿಸಲಾಗಿತ್ತು. ಈ ಕಚೇರಿ ವ್ಯಾಪ್ತಿಯಲ್ಲಿ ದಾಖಲಾಗಿರುವ ಶಬ್ದಮಾಲಿನ್ಯದ ಪ್ರಮಾಣ
ಇದಾಗಿದೆ.

andolanait

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ : ಮುಖ್ಯ ಶಿಕ್ಷಕರು ಸೇರಿ 8 ಮಂದಿ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…

42 mins ago

ಹುಲಿ ದಾಳಿ ; ಹಸು ಸಾವು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…

50 mins ago

ಜ.15ರಿಂದ ಐತಿಹಾಸಿಕ ಸುತ್ತೂರು ಜಾತ್ರೆ : 25 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…

1 hour ago

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…

1 hour ago

ಪಾಂಡವಪುರ | ಜಮೀನು ವಿವಾದ ; ವ್ಯಕ್ತಿ ಕೊಲೆ

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…

2 hours ago

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

3 hours ago