ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು….
ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ!
ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು ಈ ಪೈಕಿ ನರಕ ಚತುರ್ದಶಿಯಂದು(ಅ.೨೪)ಪಟಾಕಿ ಆರ್ಭಟ ಜೋರಾಗಿ ಆ ದಿನ ಶಬ್ದಮಾಲಿನ್ಯ ಪ್ರಮಾಣ ೭೧.೫ಡೆಸಿಬಲ್ ದಾಖಲಾಗಿದೆ.
ಹಬ್ಬದ ೨ನೇ ದಿನವಾದ ಅ.೨೫ರ ಅಮಾವಾಸ್ಯೆಯಂದು ಸೂರ್ಯಗ್ರಹಣ ಇದ್ದ ಕಾರಣದಿಂದಲೋ ಏನೋ ಪಟಾಕಿ ಸದ್ದು ಅಷ್ಟಾಗಿ ಮೊಳಗಿಲ್ಲ. ಹೀಗಾಗಿ ಆ ದಿನ ೬೧.೭ಡೆಸಿಬಲ್
ಶಬ್ದವಿತ್ತು. ಇದು ದೀಪಾವಳಿಗೆ ಮುಂಚಿನ (ಅ.೧೮) ಶಬ್ದಮಾಲಿನ್ಯಕ್ಕೆ ಸಮನಾಗಿದೆ.
ಇನ್ನು ಬಲಿಪಾಡ್ಯಮಿಯಂದು ಶಬ್ದಮಾಲಿನ್ಯ ಸರಾಸರಿ
೬೬.೧ಡೆಸಿಬಲ್ ಕಂಡುಬoದಿದೆ. ಈ ಪ್ರಕಾರ ಬಲಿಪಾಡ್ಯಮಿಗಿಂತ ನರಕಚತುರ್ದಶಿಯಂದೇ
ಪಟಾಕಿ ಮೊರೆತ ಹೆಚ್ಚಾಗಿರುವುದು ಗಮನಾರ್ಹ.
ಕಳೆದ ವರ್ಷ ಬಲಿಪಾಡ್ಯಮಿ ನ.೩ರಂದು ನಡೆದಿತ್ತು. ಆಗ ಶಬ್ದಮಾಲಿನ್ಯ ೫೮.೦೪ ಡೆಸಿಬಲ್ ದಾಖಲಾಗಿತ್ತು. ಆವಾಗ ಕೋವಿಡ್ ಹಿನ್ನೆಲೆಯಲ್ಲಿ ಪಟಾಕಿ ಬಳಕೆ ಕಡಿಮೆ ಕಾರಣ ದೀಪಾವಳಿಗೆ ಮುಂಚಿನ ಶಬ್ದಮಾಲಿನ್ಯಕ್ಕಿಂತ ೧.೧೦ಡೆಸಿಬಲ್ನಷ್ಟು ಶಬ್ದಮಾಲಿನ್ಯ ಮಾತ್ರ ಜಾಸ್ತಿಕಂಡುಬoದಿತ್ತು.
ಕರ್ನಾಟಕ ರಾಜ್ಯಮಾಲಿನ್ಯ
ನಿಯಂತ್ರಣಮoಡಳಿ ಕಚೇರಿ ಚಾ.ನಗರದ ವಾಣಿಯಾರ್ ಸ್ಟಿoಟ್ ಎಸ್ಪಿಎಸ್ ಕಾಂಪ್ಲೆಕ್ಸ್ನಲ್ಲಿ
ಕಾರ್ಯನಿರ್ವಹಿಸುತ್ತಿದ್ದು ಇಲ್ಲಿ ಸಂಜೆ ೬ರಿಂದ ರಾತ್ರಿ ೧೨ರ ತನಕ ದೀಪಾವಳಿ ಸಂದರ್ಭ ಶಬ್ದದ ಗುಣಮಟ್ಟ ಮಾಪನಯಂತ್ರ ಇರಿಸಲಾಗಿತ್ತು. ಈ ಕಚೇರಿ ವ್ಯಾಪ್ತಿಯಲ್ಲಿ ದಾಖಲಾಗಿರುವ ಶಬ್ದಮಾಲಿನ್ಯದ ಪ್ರಮಾಣ
ಇದಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…