ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು….
ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ!
ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು ಈ ಪೈಕಿ ನರಕ ಚತುರ್ದಶಿಯಂದು(ಅ.೨೪)ಪಟಾಕಿ ಆರ್ಭಟ ಜೋರಾಗಿ ಆ ದಿನ ಶಬ್ದಮಾಲಿನ್ಯ ಪ್ರಮಾಣ ೭೧.೫ಡೆಸಿಬಲ್ ದಾಖಲಾಗಿದೆ.
ಹಬ್ಬದ ೨ನೇ ದಿನವಾದ ಅ.೨೫ರ ಅಮಾವಾಸ್ಯೆಯಂದು ಸೂರ್ಯಗ್ರಹಣ ಇದ್ದ ಕಾರಣದಿಂದಲೋ ಏನೋ ಪಟಾಕಿ ಸದ್ದು ಅಷ್ಟಾಗಿ ಮೊಳಗಿಲ್ಲ. ಹೀಗಾಗಿ ಆ ದಿನ ೬೧.೭ಡೆಸಿಬಲ್
ಶಬ್ದವಿತ್ತು. ಇದು ದೀಪಾವಳಿಗೆ ಮುಂಚಿನ (ಅ.೧೮) ಶಬ್ದಮಾಲಿನ್ಯಕ್ಕೆ ಸಮನಾಗಿದೆ.
ಇನ್ನು ಬಲಿಪಾಡ್ಯಮಿಯಂದು ಶಬ್ದಮಾಲಿನ್ಯ ಸರಾಸರಿ
೬೬.೧ಡೆಸಿಬಲ್ ಕಂಡುಬoದಿದೆ. ಈ ಪ್ರಕಾರ ಬಲಿಪಾಡ್ಯಮಿಗಿಂತ ನರಕಚತುರ್ದಶಿಯಂದೇ
ಪಟಾಕಿ ಮೊರೆತ ಹೆಚ್ಚಾಗಿರುವುದು ಗಮನಾರ್ಹ.
ಕಳೆದ ವರ್ಷ ಬಲಿಪಾಡ್ಯಮಿ ನ.೩ರಂದು ನಡೆದಿತ್ತು. ಆಗ ಶಬ್ದಮಾಲಿನ್ಯ ೫೮.೦೪ ಡೆಸಿಬಲ್ ದಾಖಲಾಗಿತ್ತು. ಆವಾಗ ಕೋವಿಡ್ ಹಿನ್ನೆಲೆಯಲ್ಲಿ ಪಟಾಕಿ ಬಳಕೆ ಕಡಿಮೆ ಕಾರಣ ದೀಪಾವಳಿಗೆ ಮುಂಚಿನ ಶಬ್ದಮಾಲಿನ್ಯಕ್ಕಿಂತ ೧.೧೦ಡೆಸಿಬಲ್ನಷ್ಟು ಶಬ್ದಮಾಲಿನ್ಯ ಮಾತ್ರ ಜಾಸ್ತಿಕಂಡುಬoದಿತ್ತು.
ಕರ್ನಾಟಕ ರಾಜ್ಯಮಾಲಿನ್ಯ
ನಿಯಂತ್ರಣಮoಡಳಿ ಕಚೇರಿ ಚಾ.ನಗರದ ವಾಣಿಯಾರ್ ಸ್ಟಿoಟ್ ಎಸ್ಪಿಎಸ್ ಕಾಂಪ್ಲೆಕ್ಸ್ನಲ್ಲಿ
ಕಾರ್ಯನಿರ್ವಹಿಸುತ್ತಿದ್ದು ಇಲ್ಲಿ ಸಂಜೆ ೬ರಿಂದ ರಾತ್ರಿ ೧೨ರ ತನಕ ದೀಪಾವಳಿ ಸಂದರ್ಭ ಶಬ್ದದ ಗುಣಮಟ್ಟ ಮಾಪನಯಂತ್ರ ಇರಿಸಲಾಗಿತ್ತು. ಈ ಕಚೇರಿ ವ್ಯಾಪ್ತಿಯಲ್ಲಿ ದಾಖಲಾಗಿರುವ ಶಬ್ದಮಾಲಿನ್ಯದ ಪ್ರಮಾಣ
ಇದಾಗಿದೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…