ಜಿಲ್ಲೆಗಳು

ಬಾವಿ, ಕೊಳವೆಬಾವಿ ಕೊರೆಯಲು ಅನುಮತಿ ಕಡ್ಡಾಯ

ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಾವಿ, ಕೊಳವೆಬಾವಿ ಕೊರೆಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅಂತರ್ಜಲ ಸಂಪನ್ಮೂಲ ಮೌಲೀಕರಣ ಮಾರ್ಚ್-೨೦೧೭ ರನ್ವಯ ಗುಂಡ್ಲುಪೇಟೆ ತಾಲೂಕನ್ನು ಅಂತರ್ಜಲ ಅತೀಬಳಕೆ ತಾಲ್ಲೂಕು ಎಂದು ಅಧಿಸೂಚಿಸಲಾಗಿದ್ದು, ಅಂತರ್ಜಲ ಬಳಕೆ ಇದೇ ರೀತಿ ಮುಂದುವರಿದರೆ ಅಂತರ್ಜಲದ ಕೊರತೆಯನ್ನು ತೀವ್ರವಾಗಿ ಎದುರಿಸಬೇಕಾಗಿರುವ ನಿಟ್ಟಿನಲ್ಲಿ ಅಧಿಸೂಚಿತ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬಾವಿ, ಕೊಳವೆಬಾವಿ ಕೊರೆಯಲು ಹಾಗೂ ಅಂತರ್ಜಲ ಬಳಸಲು ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು ಹಾಗೂ ಪ್ರಸ್ತುತ ಇರುವ ಬಾವಿ, ಕೊಳವೆಬಾವಿಗಳನ್ನು ಸಹ ನೋಂದಾಯಿಸಿಕೊಳ್ಳಬೇಕು.
ಅನುಮತಿ, ನೋಂದಣಿ, ನಿರಾಕ್ಷೇಪಣಾ ಪತ್ರ ಪಡೆಯಲು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂತರ್ಜಲ ಕಚೇರಿ ದೂ.ಸಂ. ೦೮೨೨೬-೨೨೫೨೮೮ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

andolanait

Recent Posts

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

36 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

1 hour ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

2 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

3 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

3 hours ago