ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ.
ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, ಈ ಸಂದರ್ಭದಲ್ಲಿ ಮೃತ ಮೂರ್ತಿ ಕುಟುಂಬದ ಸಂಕಷ್ಟ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದ ಚಾ.ನಗರ ಪೂರ್ವ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಆನಂದ್ ಅವರು ನೊಂದ ಕುಟುಂಬಕ್ಕೆ ಕಿಂಚಿತ್ತು ಸಹಾಯ ಮಾಡುವ ಯೋಚನೆ ಮಾಡಿದ್ದರು.
ಈ ನಿಟ್ಟಿನಲ್ಲಿ ಸಾಗಿದ ಆನಂದ್ ಅವರು ತಾವು ಹಾಗೂ ಸಹ ಸಿಬ್ಬಂದಿಗಳ ಸಹಕಾರದೊಂದಿಗೆ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವುದರ ಮೂಲಕ ಪೋಲೀಸರಲ್ಲೂ ಕೂಡ ಮಾನವೀಯತೆ ಇದೆ ಎಂಬುದನ್ನೂ ಸಾಬೀತುಪಡಿಸಿದ್ದಾರೆ. ಅದರಂತೆ ಭಾನುವಾರ ಮೃತ ಕುಟುಂಬಕ್ಕೆ ಪರಿಹಾರ ನೀಡಿ, ಸಾಂತ್ವನದ ಮಾತುಗಳನ್ನಾಡಿ, ಸದಾ ನಿಮ್ಮ ನೆರವಿಗೆ ನಾವು ಇರುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಈ ವೇಳೆ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಅಶೋಕ್, ಮಹೇಶ್, ಎಲ್.ಬಸವಣ್ಣ, ಚಂದ್ರು, ಮಹಾದೇವ ಸ್ವಾಮಿ ಹಾಜರಿದ್ದರು.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…