ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ.
ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, ಈ ಸಂದರ್ಭದಲ್ಲಿ ಮೃತ ಮೂರ್ತಿ ಕುಟುಂಬದ ಸಂಕಷ್ಟ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದ ಚಾ.ನಗರ ಪೂರ್ವ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಆನಂದ್ ಅವರು ನೊಂದ ಕುಟುಂಬಕ್ಕೆ ಕಿಂಚಿತ್ತು ಸಹಾಯ ಮಾಡುವ ಯೋಚನೆ ಮಾಡಿದ್ದರು.
ಈ ನಿಟ್ಟಿನಲ್ಲಿ ಸಾಗಿದ ಆನಂದ್ ಅವರು ತಾವು ಹಾಗೂ ಸಹ ಸಿಬ್ಬಂದಿಗಳ ಸಹಕಾರದೊಂದಿಗೆ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವುದರ ಮೂಲಕ ಪೋಲೀಸರಲ್ಲೂ ಕೂಡ ಮಾನವೀಯತೆ ಇದೆ ಎಂಬುದನ್ನೂ ಸಾಬೀತುಪಡಿಸಿದ್ದಾರೆ. ಅದರಂತೆ ಭಾನುವಾರ ಮೃತ ಕುಟುಂಬಕ್ಕೆ ಪರಿಹಾರ ನೀಡಿ, ಸಾಂತ್ವನದ ಮಾತುಗಳನ್ನಾಡಿ, ಸದಾ ನಿಮ್ಮ ನೆರವಿಗೆ ನಾವು ಇರುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಈ ವೇಳೆ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಅಶೋಕ್, ಮಹೇಶ್, ಎಲ್.ಬಸವಣ್ಣ, ಚಂದ್ರು, ಮಹಾದೇವ ಸ್ವಾಮಿ ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…