ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ.
ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, ಈ ಸಂದರ್ಭದಲ್ಲಿ ಮೃತ ಮೂರ್ತಿ ಕುಟುಂಬದ ಸಂಕಷ್ಟ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದ ಚಾ.ನಗರ ಪೂರ್ವ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಆನಂದ್ ಅವರು ನೊಂದ ಕುಟುಂಬಕ್ಕೆ ಕಿಂಚಿತ್ತು ಸಹಾಯ ಮಾಡುವ ಯೋಚನೆ ಮಾಡಿದ್ದರು.
ಈ ನಿಟ್ಟಿನಲ್ಲಿ ಸಾಗಿದ ಆನಂದ್ ಅವರು ತಾವು ಹಾಗೂ ಸಹ ಸಿಬ್ಬಂದಿಗಳ ಸಹಕಾರದೊಂದಿಗೆ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವುದರ ಮೂಲಕ ಪೋಲೀಸರಲ್ಲೂ ಕೂಡ ಮಾನವೀಯತೆ ಇದೆ ಎಂಬುದನ್ನೂ ಸಾಬೀತುಪಡಿಸಿದ್ದಾರೆ. ಅದರಂತೆ ಭಾನುವಾರ ಮೃತ ಕುಟುಂಬಕ್ಕೆ ಪರಿಹಾರ ನೀಡಿ, ಸಾಂತ್ವನದ ಮಾತುಗಳನ್ನಾಡಿ, ಸದಾ ನಿಮ್ಮ ನೆರವಿಗೆ ನಾವು ಇರುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಈ ವೇಳೆ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಅಶೋಕ್, ಮಹೇಶ್, ಎಲ್.ಬಸವಣ್ಣ, ಚಂದ್ರು, ಮಹಾದೇವ ಸ್ವಾಮಿ ಹಾಜರಿದ್ದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…