ಜಿಲ್ಲೆಗಳು

ರಾಜಕೀಯ ಸ್ಪೂರ್ತಿ ಮೆರೆಯುತ್ತಿರುವ ಸಚಿವ ವಿ ಸೋಮಣ್ಣ

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಂಡು ಬಂತು.

ಡಿಸೆಂಬರ್ 12ರಂದು ಹನೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಳ ಬಗ್ಗೆ ಪರಿಶೀಲ ನಡೆಸಲು ಆಗಮಿಸಿದ್ದ ವೇಳೆ ಪಪಂ ಮಾಜಿ ಸದಸ್ಯ ಬಸವರಾಜ್ ರವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಿಲ್ಲ ತಾವು ಹನೂರು ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಪಿ ಸೋಮಣ್ಣ ಪ್ರತಿಕ್ರಿಯಿಸಿ ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹು ವಿಸ್ತಾರವನ್ನು ಒಳಗೊಂಡಿದೆ. ಮೂರು ಬಾರಿ ಶಾಸಕರಾಗಿರುವ ಶಾಸಕ ಆರ್ ನರೇಂದ್ರ ಶಕ್ತಿಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕಚೇರಿಗೆ ನೂರಾರು ಬಾರಿ ಬಂದು ಮನವಿ ಸಲ್ಲಿಸಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ ಇದು ನನಗಷ್ಟೇ ಗೊತ್ತು ಎಂದು ಶಾಸಕ ಆರ್ ನರೇಂದ್ರ ರವರ ಪರ ಗುಣಗಾನ ಮಾಡಿದರು.

ವಿ.ಸೋಮಣ್ಣ ಕಾರ್ಯ ವೈಖರಿ ಮುತ್ಸಧಿತನಕ್ಕೆ ಪಕ್ಷಾತೀತವಾಗಿ ಪ್ರಶಂಸೆ: ನೇರ ನುಡಿಯ ಹಿರಿಯ ರಾಜಕಾರಣಿ ವಿ. ಸೋಮಣ್ಣ ಅವರ ಪ್ರಭುದ್ದ ರಾಜಕೀಯ ನಡೆಗೆ ಪಕ್ಷಾತೀತವಾಗಿ ಪ್ರಶಂಸೆಗಳ ಮಹಾಪೂರವೇ ಕೇಳಿ ಬರುತ್ತಿದ್ದು, ವಿ.ಸೋಮಣ್ಣ ರಾಜಕೀಯವನ್ನು ಬದಿಗೊತ್ತಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ಆರ್. ನರೇಂದ್ರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಸೋಮಣ್ಣ ಅವರನ್ನು ಗುಣಗಾನ ಮಾಡುತ್ತಿದ್ದಾರೆ.

ವಿ. ಸೋಮಣ್ಣ ಕೃಪಾಕಟಾಕ್ಷದಿಂದ ಅಭಿವೃದ್ಧಿಯತ್ತ ಹನೂರು : ಶಾಸಕ ಆರ್.ನರೇಂದ್ರ ಅವರ ಅವಿರತ ಶ್ರಮದಿಂದ ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಚಿವ ವಿ. ಸೋಮಣ್ಣ ಉಸ್ತುವಾರಿ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸುತ್ತಿರುವುದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ. ಮುಖ್ಯಮಂತ್ರಿ ಕ್ಷೇತ್ರಕ್ಕೆ ಬರುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಲು ಸಚಿವ ವಿ. ಸೋಮಣ್ಣ ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿಯಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ಈ ರೂಪದಲ್ಲಾದರೂ ಅಭಿವೃದ್ಧಿಯತ್ತ ಸಾಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ವಿ. ಸೋಮಣ್ಣ ಅವರ ಮೇಲಿನ ಪ್ರಶಂಸೆಗೆ ಕಾರಣವಾಗಿದೆ.

andolanait

Recent Posts

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…

36 mins ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…

38 mins ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…

40 mins ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…

42 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಬ್ಯಾಂಕ್ ಠೇವಣಿಗಳಿಗಿಂತ ವೇಗವಾಗಿ ಸಾಲಗಳು ಬೆಳೆಯುತ್ತಿವೆ

ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…

46 mins ago

ರಾಜ್ಯದ ಇತಿಹಾಸದ ಪುಟಗಳಲ್ಲಿ ಮೈಸೂರಿನ ದಾಖಲೆ

ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…

53 mins ago