ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಂಡು ಬಂತು.
ಡಿಸೆಂಬರ್ 12ರಂದು ಹನೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಳ ಬಗ್ಗೆ ಪರಿಶೀಲ ನಡೆಸಲು ಆಗಮಿಸಿದ್ದ ವೇಳೆ ಪಪಂ ಮಾಜಿ ಸದಸ್ಯ ಬಸವರಾಜ್ ರವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಿಲ್ಲ ತಾವು ಹನೂರು ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಪಿ ಸೋಮಣ್ಣ ಪ್ರತಿಕ್ರಿಯಿಸಿ ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹು ವಿಸ್ತಾರವನ್ನು ಒಳಗೊಂಡಿದೆ. ಮೂರು ಬಾರಿ ಶಾಸಕರಾಗಿರುವ ಶಾಸಕ ಆರ್ ನರೇಂದ್ರ ಶಕ್ತಿಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕಚೇರಿಗೆ ನೂರಾರು ಬಾರಿ ಬಂದು ಮನವಿ ಸಲ್ಲಿಸಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ ಇದು ನನಗಷ್ಟೇ ಗೊತ್ತು ಎಂದು ಶಾಸಕ ಆರ್ ನರೇಂದ್ರ ರವರ ಪರ ಗುಣಗಾನ ಮಾಡಿದರು.
ವಿ.ಸೋಮಣ್ಣ ಕಾರ್ಯ ವೈಖರಿ ಮುತ್ಸಧಿತನಕ್ಕೆ ಪಕ್ಷಾತೀತವಾಗಿ ಪ್ರಶಂಸೆ: ನೇರ ನುಡಿಯ ಹಿರಿಯ ರಾಜಕಾರಣಿ ವಿ. ಸೋಮಣ್ಣ ಅವರ ಪ್ರಭುದ್ದ ರಾಜಕೀಯ ನಡೆಗೆ ಪಕ್ಷಾತೀತವಾಗಿ ಪ್ರಶಂಸೆಗಳ ಮಹಾಪೂರವೇ ಕೇಳಿ ಬರುತ್ತಿದ್ದು, ವಿ.ಸೋಮಣ್ಣ ರಾಜಕೀಯವನ್ನು ಬದಿಗೊತ್ತಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ಆರ್. ನರೇಂದ್ರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಸೋಮಣ್ಣ ಅವರನ್ನು ಗುಣಗಾನ ಮಾಡುತ್ತಿದ್ದಾರೆ.
ವಿ. ಸೋಮಣ್ಣ ಕೃಪಾಕಟಾಕ್ಷದಿಂದ ಅಭಿವೃದ್ಧಿಯತ್ತ ಹನೂರು : ಶಾಸಕ ಆರ್.ನರೇಂದ್ರ ಅವರ ಅವಿರತ ಶ್ರಮದಿಂದ ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಚಿವ ವಿ. ಸೋಮಣ್ಣ ಉಸ್ತುವಾರಿ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸುತ್ತಿರುವುದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ. ಮುಖ್ಯಮಂತ್ರಿ ಕ್ಷೇತ್ರಕ್ಕೆ ಬರುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಲು ಸಚಿವ ವಿ. ಸೋಮಣ್ಣ ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿಯಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ಈ ರೂಪದಲ್ಲಾದರೂ ಅಭಿವೃದ್ಧಿಯತ್ತ ಸಾಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ವಿ. ಸೋಮಣ್ಣ ಅವರ ಮೇಲಿನ ಪ್ರಶಂಸೆಗೆ ಕಾರಣವಾಗಿದೆ.
ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…
ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…
ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…
ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…
ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…