ಜಿಲ್ಲೆಗಳು

ರಾಜಕೀಯ ಸ್ಪೂರ್ತಿ ಮೆರೆಯುತ್ತಿರುವ ಸಚಿವ ವಿ ಸೋಮಣ್ಣ

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ರವರ ಪರ ರಾಜಕೀಯ ಸ್ಪೂರ್ತಿ ಮೆರೆದ ಪ್ರಸಂಗ ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಂಡು ಬಂತು.

ಡಿಸೆಂಬರ್ 12ರಂದು ಹನೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುತ್ತಿರುವ ಹಿನ್ನೆಲೆ ಅಗತ್ಯ ಸಿದ್ಧತೆಗಳ ಬಗ್ಗೆ ಪರಿಶೀಲ ನಡೆಸಲು ಆಗಮಿಸಿದ್ದ ವೇಳೆ ಪಪಂ ಮಾಜಿ ಸದಸ್ಯ ಬಸವರಾಜ್ ರವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಿಲ್ಲ ತಾವು ಹನೂರು ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಪಿ ಸೋಮಣ್ಣ ಪ್ರತಿಕ್ರಿಯಿಸಿ ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹು ವಿಸ್ತಾರವನ್ನು ಒಳಗೊಂಡಿದೆ. ಮೂರು ಬಾರಿ ಶಾಸಕರಾಗಿರುವ ಶಾಸಕ ಆರ್ ನರೇಂದ್ರ ಶಕ್ತಿಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕಚೇರಿಗೆ ನೂರಾರು ಬಾರಿ ಬಂದು ಮನವಿ ಸಲ್ಲಿಸಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ ಇದು ನನಗಷ್ಟೇ ಗೊತ್ತು ಎಂದು ಶಾಸಕ ಆರ್ ನರೇಂದ್ರ ರವರ ಪರ ಗುಣಗಾನ ಮಾಡಿದರು.

ವಿ.ಸೋಮಣ್ಣ ಕಾರ್ಯ ವೈಖರಿ ಮುತ್ಸಧಿತನಕ್ಕೆ ಪಕ್ಷಾತೀತವಾಗಿ ಪ್ರಶಂಸೆ: ನೇರ ನುಡಿಯ ಹಿರಿಯ ರಾಜಕಾರಣಿ ವಿ. ಸೋಮಣ್ಣ ಅವರ ಪ್ರಭುದ್ದ ರಾಜಕೀಯ ನಡೆಗೆ ಪಕ್ಷಾತೀತವಾಗಿ ಪ್ರಶಂಸೆಗಳ ಮಹಾಪೂರವೇ ಕೇಳಿ ಬರುತ್ತಿದ್ದು, ವಿ.ಸೋಮಣ್ಣ ರಾಜಕೀಯವನ್ನು ಬದಿಗೊತ್ತಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ಆರ್. ನರೇಂದ್ರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಸೋಮಣ್ಣ ಅವರನ್ನು ಗುಣಗಾನ ಮಾಡುತ್ತಿದ್ದಾರೆ.

ವಿ. ಸೋಮಣ್ಣ ಕೃಪಾಕಟಾಕ್ಷದಿಂದ ಅಭಿವೃದ್ಧಿಯತ್ತ ಹನೂರು : ಶಾಸಕ ಆರ್.ನರೇಂದ್ರ ಅವರ ಅವಿರತ ಶ್ರಮದಿಂದ ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಚಿವ ವಿ. ಸೋಮಣ್ಣ ಉಸ್ತುವಾರಿ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸುತ್ತಿರುವುದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ. ಮುಖ್ಯಮಂತ್ರಿ ಕ್ಷೇತ್ರಕ್ಕೆ ಬರುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಲು ಸಚಿವ ವಿ. ಸೋಮಣ್ಣ ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿಯಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ಈ ರೂಪದಲ್ಲಾದರೂ ಅಭಿವೃದ್ಧಿಯತ್ತ ಸಾಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ವಿ. ಸೋಮಣ್ಣ ಅವರ ಮೇಲಿನ ಪ್ರಶಂಸೆಗೆ ಕಾರಣವಾಗಿದೆ.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago