ಚಾಮರಾಜನಗರ: ಕಳೆದ 3-4 ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾ.ನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರೈತ ಮುಖಂಡ ಹೆಬ್ಬಸೂರು ಬಸವಣ್ಣ ಅವರ ಬಳಿ ಕೆಲವು ಸಮಯ ಚರ್ಚೆ ನಡೆಸಿದರು. ನಂತರ ಸುವರ್ಣಾವತಿ ನದಿ ನೀರಿನ ಪ್ರವಾಹದಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ತೆಂಗಿನಕಾಯಿಗಳು ಕೊಚ್ಚಿ ಹೋಗಿ ಸಂಕಷ್ಟಕ್ಕೆ ಹೀಡಾಗಿದ್ದ ರೈತ ಮರಿಸ್ವಾಮಿ ಅವರ ತೋಟದ ಮನೆಗೆ ಭೇಟಿ ನೀಡಿ ರಾಜೇಶ್ವರಿ ಹಾಗೂ ಅವರ ಮಗ ಕಮಲೇಶ್ ಅವರ ಜೊತೆಗೆ ಹಾನಿಯಾಗಿರುವ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅದೇ ಗ್ರಾಮದ ರೈತ ಹೊನ್ನಪ್ಪ ಅವರು ತನ್ನ ಜಮೀನು ಹೊಳೆಯ ತೀರದಲ್ಲಿದ್ದು ತಡೆಗೋಡೆ ನಿರ್ಮಾಣ ಮಾಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರು ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಇದರಿಂದ ಅರ್ಧ ಎಕರೆಯಷ್ಟು ಅಡಿಕೆ ತೋಟ ನಾಶವಾಗಿದೆ ಎಂದು ತಿಳಿಸಿದರು ಸಚಿವರು ಅಧಿಕಾರಿಗಳಿಗೆ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿದರು.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…