ಚಾಮರಾಜನಗರ: ಕಳೆದ 3-4 ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾ.ನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರೈತ ಮುಖಂಡ ಹೆಬ್ಬಸೂರು ಬಸವಣ್ಣ ಅವರ ಬಳಿ ಕೆಲವು ಸಮಯ ಚರ್ಚೆ ನಡೆಸಿದರು. ನಂತರ ಸುವರ್ಣಾವತಿ ನದಿ ನೀರಿನ ಪ್ರವಾಹದಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ತೆಂಗಿನಕಾಯಿಗಳು ಕೊಚ್ಚಿ ಹೋಗಿ ಸಂಕಷ್ಟಕ್ಕೆ ಹೀಡಾಗಿದ್ದ ರೈತ ಮರಿಸ್ವಾಮಿ ಅವರ ತೋಟದ ಮನೆಗೆ ಭೇಟಿ ನೀಡಿ ರಾಜೇಶ್ವರಿ ಹಾಗೂ ಅವರ ಮಗ ಕಮಲೇಶ್ ಅವರ ಜೊತೆಗೆ ಹಾನಿಯಾಗಿರುವ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅದೇ ಗ್ರಾಮದ ರೈತ ಹೊನ್ನಪ್ಪ ಅವರು ತನ್ನ ಜಮೀನು ಹೊಳೆಯ ತೀರದಲ್ಲಿದ್ದು ತಡೆಗೋಡೆ ನಿರ್ಮಾಣ ಮಾಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರು ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಇದರಿಂದ ಅರ್ಧ ಎಕರೆಯಷ್ಟು ಅಡಿಕೆ ತೋಟ ನಾಶವಾಗಿದೆ ಎಂದು ತಿಳಿಸಿದರು ಸಚಿವರು ಅಧಿಕಾರಿಗಳಿಗೆ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…