ಜಿಲ್ಲೆಗಳು

ಮಳೆಗೆ ಮನೆ ಗೋಡೆ ಕುಸಿತ, ಅಪಾಯಕ್ಕೆ ಆಹ್ವಾನ

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..

ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.

ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ  ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.

ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.

andolanait

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

50 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

2 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago