ಜಿಲ್ಲೆಗಳು

ಮಳೆಗೆ ಮನೆ ಗೋಡೆ ಕುಸಿತ, ಅಪಾಯಕ್ಕೆ ಆಹ್ವಾನ

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..

ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.

ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ  ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.

ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

1 hour ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

2 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

2 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

2 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

2 hours ago