ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..
ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.
ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.
ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…
ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…