ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..
ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.
ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.
ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…