ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆ ಗ್ರಾಮದಲ್ಲಿ ಗೋಡೆ ಕುಸಿದು ಪ್ರಾಣಾಪಾಯದಿಂದ ಪಾರಾದ ಘಟನೆ ಜರುಗಿದೆ..
ಪುಟ್ಟಮ್ಮ ಬಿನ್ ಜಡೆ ಮಾದಯ್ಯ ಎಂಬುವವರ ಮನೆ ಗೋಡೆ ಕುಸಿದಿದ್ದು ಸಂಪೂರ್ಣವಾಗಿ ಇಂದೊ ನಾಳೆಯೋ ಬೀಳುತ್ತದೆ ಆ ಹಂತದಲ್ಲಿ ಗೋಡೆಗಳಿದೆ.
ಪರಿಹಾರಕ್ಕಾಗಿ ಮನವಿ : ತೀರಾ ಬಡತನ ಹೊಂದಿರುವ ಕುಟುಂಬ ಇದೀಗ ಮನೆ ಗೋಡೆ ಕುಸಿದು ಕಂಗಲಾಗಿದ್ದು, ಪರಿಹಾರ ನೀಡುವ ಮೂಲಕ ಸಹಾಯಸ್ತ ಚಾಚಬೇಕು ಎಂದು ಪುಟ್ಟಮ್ಮ ಒತ್ತಾಯ ಮಾಡಿದ್ದಾರೆ.
ಜಿಟಿ ಜಿಟಿ ಮಳೆ : ಶುಕ್ರವಾರ ಬೆಳಿಗ್ಗೆ ಸುಮಾರಿಗೆ ಪ್ರಾರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತ ವ್ಯಸ್ತ್ಯವಾಗಿದೆ.ಅಲ್ಲದೆ ಒಂದೇ ಸಮನೆ ಸುರಿಯುತ್ತಿರುವ ಪರಿಣಾಮ ಜನರ ಓಡಾಟ ಸಹ ಕಡಿಮೆಯಾಗಿತ್ತು. ಅಲ್ಲದೆ ಕೆಶಿಪ್ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ರುವುದರಿಂದ ವಾಹನ ಸವಾರರು ಸಂಚರಿಸಲು ತೀವ್ರ ಹರಸಾಹಸ ಪಡಬೇಕಾಗಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…