ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು.
ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜ್ಯೋತಿ ಗೌಡನಪುರ ವ್ಯಾಪ್ತಿಯ ಹಲವಾರು ಕೆರೆ ಕಟ್ಟೆಗಳು ಕೋಡಿ ಬಿದ್ದು ಗ್ರಾಮ ಜಲದಿಗ್ಭಂಧನವಾಗಿತ್ತು. ಹಲವಾರು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರು. ಮಳೆಯಿಂದ ಹಾನಿಗೊಳಗದ ಸ್ಥಳಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ರವರು ಭೇಟಿ ನೀಡಿ, ತೀವ್ರ ಸಂಕಷ್ಟ ಅನುಭವಿಸುತ್ತಿರುವ ಪ್ರತಿ ಕುಟುಂಬಗಳಿಗೆ ತಲಾ ೫ ಸಾವಿರ ರೂ ನಂತೆ ಸುಮಾರು ೧೫ ಕುಟುಂಬಗಳಿಗೆ ೭೫ ಸಾವಿರ ರೂಗಳ ಧನ ಸಹಾಯ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಸುಂದರ್, ಗ್ರಾ.ಪಂ ಸದಸ್ಯರಾದ ನಿಂಗನಾಯಕ, ಕೃಷ್ಣನಾಯಕ, ವೆಂಕಟೇಶ್ ನಾಯಕ, ಭೂಮಿಕಾ, ಮಂಜು, ದೊರೆಸ್ವಾಮಿ,
ಸಾಗರ್ ಎಂ, ರಾಘವೇಂದ್ರ, ಪ್ರಸನ್ನ, ಹಾಗೂ ಇತರರು ಹಾಜರಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…