ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು.
ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜ್ಯೋತಿ ಗೌಡನಪುರ ವ್ಯಾಪ್ತಿಯ ಹಲವಾರು ಕೆರೆ ಕಟ್ಟೆಗಳು ಕೋಡಿ ಬಿದ್ದು ಗ್ರಾಮ ಜಲದಿಗ್ಭಂಧನವಾಗಿತ್ತು. ಹಲವಾರು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರು. ಮಳೆಯಿಂದ ಹಾನಿಗೊಳಗದ ಸ್ಥಳಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ರವರು ಭೇಟಿ ನೀಡಿ, ತೀವ್ರ ಸಂಕಷ್ಟ ಅನುಭವಿಸುತ್ತಿರುವ ಪ್ರತಿ ಕುಟುಂಬಗಳಿಗೆ ತಲಾ ೫ ಸಾವಿರ ರೂ ನಂತೆ ಸುಮಾರು ೧೫ ಕುಟುಂಬಗಳಿಗೆ ೭೫ ಸಾವಿರ ರೂಗಳ ಧನ ಸಹಾಯ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಸುಂದರ್, ಗ್ರಾ.ಪಂ ಸದಸ್ಯರಾದ ನಿಂಗನಾಯಕ, ಕೃಷ್ಣನಾಯಕ, ವೆಂಕಟೇಶ್ ನಾಯಕ, ಭೂಮಿಕಾ, ಮಂಜು, ದೊರೆಸ್ವಾಮಿ,
ಸಾಗರ್ ಎಂ, ರಾಘವೇಂದ್ರ, ಪ್ರಸನ್ನ, ಹಾಗೂ ಇತರರು ಹಾಜರಿದ್ದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…