ಜಿಲ್ಲೆಗಳು

ಚಾ. ನಗರ : ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ರೈತ ಮುಖಂಡರಿಂದ ಪರಿಹಾರ ವಿತರಣೆ

ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜ್ಯೋತಿ ಗೌಡನಪುರ ವ್ಯಾಪ್ತಿಯ ಹಲವಾರು ಕೆರೆ ಕಟ್ಟೆಗಳು ಕೋಡಿ ಬಿದ್ದು ಗ್ರಾಮ ಜಲದಿಗ್ಭಂಧನವಾಗಿತ್ತು. ಹಲವಾರು ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರು. ಮಳೆಯಿಂದ ಹಾನಿಗೊಳಗದ ಸ್ಥಳಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ರವರು ಭೇಟಿ ನೀಡಿ, ತೀವ್ರ ಸಂಕಷ್ಟ ಅನುಭವಿಸುತ್ತಿರುವ ಪ್ರತಿ ಕುಟುಂಬಗಳಿಗೆ ತಲಾ ೫ ಸಾವಿರ ರೂ ನಂತೆ ಸುಮಾರು ೧೫ ಕುಟುಂಬಗಳಿಗೆ ೭೫ ಸಾವಿರ ರೂಗಳ ಧನ ಸಹಾಯ ಮಾಡಿದರು.

ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಸುಂದರ್, ಗ್ರಾ.ಪಂ ಸದಸ್ಯರಾದ ನಿಂಗನಾಯಕ, ಕೃಷ್ಣನಾಯಕ, ವೆಂಕಟೇಶ್ ನಾಯಕ, ಭೂಮಿಕಾ, ಮಂಜು, ದೊರೆಸ್ವಾಮಿ,
ಸಾಗರ್ ಎಂ, ರಾಘವೇಂದ್ರ, ಪ್ರಸನ್ನ, ಹಾಗೂ ಇತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago