ಜಿಲ್ಲೆಗಳು

ಚಾ.ನಗರ : ಜಿಲ್ಲೆಯ ಶಾಲೆಗಳಲ್ಲಿ ಸಂಚರಿಸಲಿದೆ ಖಗೋಳ ತಾರಾಲಯ

ಎ.ಎಸ್.ಮಣಿಕಂಠ

ಶಾಲಾ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ.
ಸರ್ಕಾರಿ ಶಾಲಾ ಮಕ್ಕಳ ವಿಜ್ಞಾನ ಕಲಿಕೆಗೆ ಉಪಯೋಗ.

ಚಾಮರಾಜನಗರ: ದಸರಾ ರಜೆ ಪ್ರಾರಂಭಕ್ಕೂ ಮುನ್ನವೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಡಿಜಿಟಲ್ ತಾರಾಲಯ ಸಂಚರಿಸಲಿದ್ದು ಸರ್ಕಾರಿ ಶಾಲೆಯ ಮಕ್ಕಳ ವಿಜ್ಞಾನ ಕಲಿಕೆಗೆ ಸಾಕಷ್ಟು ಅನುಕೂಲವಾಗಲಿದೆ.

ಜಿಲ್ಲೆಯ ಚಾ.ನಗರ ತಾಲ್ಲೂಕಿನ ೧೬೭ ಶಾಲೆ, ಗುಂಡ್ಲುಪೇಟೆ ತಾಲ್ಲೂಕಿನ ೧೧೪ ಶಾಲೆ, ಹನೂರು ತಾಲ್ಲೂಕಿನ ೯೫ ಶಾಲೆ, ಕೊಳ್ಳೇಗಾಲ ತಾಲ್ಲೂಕಿನ ೬೬ ಸರ್ಕಾರಿ ಶಾಲೆಗಳು ಹಾಗೂ ಯಳಂದೂರು ತಾಲ್ಲೂಕಿನ ೫೨ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಡಿಜಿಟಲ್ ಸಂಚಾರಿ ತಾರಾಲಯ ಮೂಲಕ ಮಕ್ಕಳಿಗೆ ವಿಜ್ಞಾನದ ಕಲಿಕೆಯನ್ನು ಮತ್ತಷ್ಟು ಸುಲಭ ಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಶಾಲೆಯ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ ಎಂಬ ಉದ್ದೇಶದಿಂದ ಯಳಂದೂರು ತಾಲ್ಲೂಕಿನ ಯರಗಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಖಗೋಳ ವಿಜ್ಞಾನದ ಬಗ್ಗೆ ಹೆಚ್ಚಿನ ಮಾತಿ ನೀಡುವ ತಾರಾಲಯವನ್ನು ಮಕ್ಕಳಿಗೆ ಪರಿಚಯಿಸಲಾಗುತ್ತಿದೆ. ನುರಿತ ಶಿಕ್ಷಕರಿಂದ ಖಗೋಳ ವಿಜ್ಞಾನದ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಗುತ್ತಿದ್ದು ಸರ್ಕಾರಿ ಶಾಲೆಯ ಮಕ್ಕಳು ಈ ಕಾರ್ಯಕ್ರಮದ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಚಾರಿ ತಾರಾಲಯದಲ್ಲಿ ಏನಿದೆ?: ತಂತ್ರಜ್ಞಾನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಖಗೋಳ ವಿಜ್ಞಾನದ ವಿಸ್ಮಯ, ತಾರಾ ಮಂಡಲದ ಕೌತುಕದ ಬಗ್ಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಮಾಹಿತಿ ನೀಡಲಾಗುತ್ತದೆ. ಕಾಲ್ಪನಿಕ ಆಕಾಶಕಾಯ ಸೃಷ್ಟಿಸುವ ಮೂಲಕ ಗ್ರಹ, ನಕ್ಷತ್ರ ಹಾಗೂ ಇತರೆ ಆಕಾಶಕಾಯಗಳನ್ನು ತೋರಿಸಲಾಗುತ್ತದೆ.
ಗೋಳಕಾರದ ಗುಮ್ಮಟದಲ್ಲಿ ಏಕಕಾಲದಲ್ಲಿ ೩೦-೪೦ ವಿದ್ಯಾರ್ಥಿಗಳು ೧೮೦ ಡಿಗ್ರಿಯಲ್ಲಿ ಗುಣಮಟ್ಟದ ಶಬ್ದದೊಂದಿಗೆ ಗುಣಮಟ್ಟದ ಪಿಡಿಯ ವೀಕ್ಷಿಸಬಹುದಾಗಿದೆ.

ಸತೀಶ್ ಕುಮಾರ್, ಪ್ರೊಜೆಕ್ಟರ್ ಕೋ- ಆರ್ಡಿನೇಟರ್.

ಡಿಜಿಟಲ್ ಸಂಚಾರಿ ತಾರಾಲಯದ ಮೂಲಕ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನದ ಕೌತುಕದ ಕುರಿತು ಸಾಕಷ್ಟು ಮಾಹಿತಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು.


-ಸಂಜನಾ.ಪಿ, ವಿದ್ಯಾರ್ಥಿ.

ಸೂರ್ಯ, ಭೂಮಿ, ಗ್ರಹ ಮಂಡಲಗಳ ಬಗ್ಗೆ ಸಾಕಷ್ಟು ವಿಡಿಯೋಗಳ ಮೂಲಕ ಖಗೋಳ ವಿಜ್ಞಾನದ ಕುರಿತು ಮಾಹಿತಿ ನೀಡಿದರು. ಇದು ನನಗೆ ತುಂಬಾ ಖುಷಿ ನೀಡಿತು.


ಮಂಜುನಾಥ್ ಡಿಡಿಪಿಐ ಚಾಮರಾಜನಗರ.

ಈ ಮೊದಲು ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಸಂಚಾರಿ ತಾರಾಲಯದ ಮೂಲಕ ಖಗೋಳ ವಿಜ್ಞಾನದ ಕುರಿತು ಮಾಹಿತಿ ನೀಡಲಾಗುತ್ತು. ಮತ್ತೆ ಪ್ರಾರಂಭಸಲಾಗಿದ್ದು ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಲಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago