ಎ.ಎಸ್.ಮಣಿಕಂಠ
ಶಾಲಾ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ.
ಸರ್ಕಾರಿ ಶಾಲಾ ಮಕ್ಕಳ ವಿಜ್ಞಾನ ಕಲಿಕೆಗೆ ಉಪಯೋಗ.
ಚಾಮರಾಜನಗರ: ದಸರಾ ರಜೆ ಪ್ರಾರಂಭಕ್ಕೂ ಮುನ್ನವೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಡಿಜಿಟಲ್ ತಾರಾಲಯ ಸಂಚರಿಸಲಿದ್ದು ಸರ್ಕಾರಿ ಶಾಲೆಯ ಮಕ್ಕಳ ವಿಜ್ಞಾನ ಕಲಿಕೆಗೆ ಸಾಕಷ್ಟು ಅನುಕೂಲವಾಗಲಿದೆ.
ಜಿಲ್ಲೆಯ ಚಾ.ನಗರ ತಾಲ್ಲೂಕಿನ ೧೬೭ ಶಾಲೆ, ಗುಂಡ್ಲುಪೇಟೆ ತಾಲ್ಲೂಕಿನ ೧೧೪ ಶಾಲೆ, ಹನೂರು ತಾಲ್ಲೂಕಿನ ೯೫ ಶಾಲೆ, ಕೊಳ್ಳೇಗಾಲ ತಾಲ್ಲೂಕಿನ ೬೬ ಸರ್ಕಾರಿ ಶಾಲೆಗಳು ಹಾಗೂ ಯಳಂದೂರು ತಾಲ್ಲೂಕಿನ ೫೨ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಡಿಜಿಟಲ್ ಸಂಚಾರಿ ತಾರಾಲಯ ಮೂಲಕ ಮಕ್ಕಳಿಗೆ ವಿಜ್ಞಾನದ ಕಲಿಕೆಯನ್ನು ಮತ್ತಷ್ಟು ಸುಲಭ ಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.
ಸಂಚಾರಿ ತಾರಾಲಯದಲ್ಲಿ ಏನಿದೆ?: ತಂತ್ರಜ್ಞಾನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಖಗೋಳ ವಿಜ್ಞಾನದ ವಿಸ್ಮಯ, ತಾರಾ ಮಂಡಲದ ಕೌತುಕದ ಬಗ್ಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಮಾಹಿತಿ ನೀಡಲಾಗುತ್ತದೆ. ಕಾಲ್ಪನಿಕ ಆಕಾಶಕಾಯ ಸೃಷ್ಟಿಸುವ ಮೂಲಕ ಗ್ರಹ, ನಕ್ಷತ್ರ ಹಾಗೂ ಇತರೆ ಆಕಾಶಕಾಯಗಳನ್ನು ತೋರಿಸಲಾಗುತ್ತದೆ.
ಗೋಳಕಾರದ ಗುಮ್ಮಟದಲ್ಲಿ ಏಕಕಾಲದಲ್ಲಿ ೩೦-೪೦ ವಿದ್ಯಾರ್ಥಿಗಳು ೧೮೦ ಡಿಗ್ರಿಯಲ್ಲಿ ಗುಣಮಟ್ಟದ ಶಬ್ದದೊಂದಿಗೆ ಗುಣಮಟ್ಟದ ಪಿಡಿಯ ವೀಕ್ಷಿಸಬಹುದಾಗಿದೆ.
ಡಿಜಿಟಲ್ ಸಂಚಾರಿ ತಾರಾಲಯದ ಮೂಲಕ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನದ ಕೌತುಕದ ಕುರಿತು ಸಾಕಷ್ಟು ಮಾಹಿತಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು.
ಸೂರ್ಯ, ಭೂಮಿ, ಗ್ರಹ ಮಂಡಲಗಳ ಬಗ್ಗೆ ಸಾಕಷ್ಟು ವಿಡಿಯೋಗಳ ಮೂಲಕ ಖಗೋಳ ವಿಜ್ಞಾನದ ಕುರಿತು ಮಾಹಿತಿ ನೀಡಿದರು. ಇದು ನನಗೆ ತುಂಬಾ ಖುಷಿ ನೀಡಿತು.
ಈ ಮೊದಲು ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಸಂಚಾರಿ ತಾರಾಲಯದ ಮೂಲಕ ಖಗೋಳ ವಿಜ್ಞಾನದ ಕುರಿತು ಮಾಹಿತಿ ನೀಡಲಾಗುತ್ತು. ಮತ್ತೆ ಪ್ರಾರಂಭಸಲಾಗಿದ್ದು ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…