ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಜಿಲ್ಲಾಧಿಕಾರಿ ಜೊತೆ ಒಂದಿಡಿ ದಿನ ಇರುವ ವಿಶೇಷ ಅವಕಾಶ ಪಡೆದಿದ್ದಾರೆ.
ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಕೊಳ್ಳೆಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ 10.30ಕ್ಕೆ ಡಿಸಿ ಚಾರುಲತಾ ಸೋಮಲ್ ಅವರು ಸಾರಾ ಅವರನ್ನು ಬರಮಾಡಿಕೊಂಡರು.
ಜಿಲ್ಲಾಧಿಕಾರಿ ಜೊತೆ ಬೆಳಗ್ಗೆಯಿಂದ ಸಂಜೆವರೆಗೂ ಇದ್ದು, ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕಳೆದ ಜುಲೈ ತಿಂಗಳಲ್ಲಿ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜೆ. ಅಗ್ನೀಶ್ ಸಾರಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪಕ್ಕದ ಕುರ್ಚಿಯಲ್ಲೇ ಕುಳಿತು ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಾರಾ ಎಲ್ಲವನ್ನೂ ನೋಟ್ ಮಾಡಿಕೊಳ್ಳುತ್ತಿದ್ದರು, ಜಿಲ್ಲಾಧಿಕಾರಿ ಅವರ ಕಾರ್ಯವೈಖರಿ ಹೇಗಿರುತ್ತೆ ಎಂಬುದನ್ನು ಗಮನಿಸುತ್ತಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…