ಜಿಲ್ಲೆಗಳು

ಚಾ.ನಗರದಲ್ಲಿ ಸೊನೆ ಅವರೆ ಘಮಘಮ!

ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ

ರಾಜೇಶ್ ಬೆಂಡರವಾಡಿ
ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ.
ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ ನಗರದಲ್ಲಿ ಅವರೆಕಾಯಿ ಕಿಲೋಗೆ ೮೦ರೂ.ಗೆ ಮಾರಾಟವಾಯಿತು. ಜನರ ಪಾಲಿಗೆ ಈ ಬೆಲೆ ತುಟ್ಟಿ! ಅಲ್ಲಲ್ಲಿ ಕೊಯ್ಲು ಶುರುವಾಗಿ ಅವರೆಕಾಯಿ ಈಗಷ್ಟೇ ಮಾರುಕಟ್ಟೆಗೆ ಬರಲಾರಂಭಿಸಿದೆ. ಕೊಯ್ಲು ಸಾರ್ವತ್ರಿಕವಾಗಿ ನಡೆಯತೊಡಗಿ ಎಲ್ಲೆಡೆಯಿಂದ ಅವರೆ ಬರತೊಡಗಿದರೆ ಬೆಲೆ ದುಬಾರಿ ಇರಲ್ಲ. ನವೆಂಬರ್ ಕೊನೆಯಿಂದ ಜನವರಿ ಅಂತ್ಯದವರೆಗೆ ಅವರೆಕಾಯಿ ಸೀಜನ್ ಇರುವುದಾಗಿ ವ್ಯಾಪಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು.
ಮಳೆ ಆಶ್ರಿತ ಖುಷ್ಕಿ ಜಮೀನಿನಲ್ಲಿ ಅಧಿಕವಾಗಿ ಅವರೆ ಬೆಳೆಯಲಾಗುತ್ತದೆ. ನೀರಾವರಿಯಲ್ಲಿ ಬೆಳೆದಿದ್ದಕ್ಕಿಂತ ಖುಷ್ಕಿ ಜಮೀನಿನಲ್ಲಿ ಬೆಳೆದ ಅವರೆೆಯೇ ಹೆಚ್ಚು ಸ್ವಾದಿಷ್ಟ. ಮಂಜಿನ ಹನಿಯಿಂದ ತೊಯ್ದು ಘಮಘಮಿಸುವ ಸೊನೆ ಸೊಗಡಿನ ಅವರೆ ಬಹಳ ರುಚಿಕರವಾಗಿರುತ್ತದೆ. ಯಾವುದರಲ್ಲಿ ಈ ಸೊಗಡು ಇರುವುದಿಲ್ಲವೋ ಅದು ಅಷ್ಟೊಂದು ರುಚಿಯಾಗಿರುವುದಿಲ್ಲ ಎಂದು ಗ್ರಾಹಕ ಮಲ್ಲು ಹೇಳಿದರು.
ಎಲ್ಲಾ ಕಾಲದಲ್ಲಿ ಹೈಬ್ರಿಡ್ ಅವರೆ ಸಿಗುತ್ತದೆ. ಅದರಲ್ಲಿ ಅವರೆ ಪರಿಮಳವೇ ಇರುವುದಿಲ್ಲ. ಹೀಗಾಗಿ ಚಳಿಗಾಲದ ಅವರೆಕಾಯಿಯನ್ನು ಜನ ಇಷ್ಟಪಡುವುದಾಗಿ ಹೇಳುತ್ತಾರೆ ಅವರು.
ಹನೂರು, ಮಲೆಮಹದೇಶ್ವರಬೆಟ್ಟ, ರಾಮಾಪುರ, ಲೊಕ್ಕನಹಳ್ಳಿ ಹಾಗೂ ಕೊಳ್ಳೇಗಾಲ ಭಾಗದಲ್ಲಿ ಅವರೆಕಾಯಿಯನ್ನು ಹೆಚ್ಚು ಬೆಳೆಲಾಗುತ್ತದೆ. ಗುಂಡ್ಲುಪೇಟೆ, ಚಾಮರಾಜನಗರ ತಾಲ್ಲೂಕುಗಳಲ್ಲೂ ಈ ಬೆಳೆ ಇದ್ದು ಈಗೀಗ ಕೊಯ್ಲಿಗೆ ಬರತೊಡಗಿದೆ. ಅನೇಕ ಕಡೆ ಇನ್ನೂ ಹೂ ಹಂತದಲ್ಲೇ ಇದೆ. ಟಿ.ನರಸೀಪುರ, ಹುಣಸೂರು ಕಡೆಯಿಂದಲೂ ನಗರದ ಮಾರುಕಟ್ಟೆಗೆ ಅವರೆಕಾಯಿ ಬರುತ್ತಿದೆ.
ಸಂಕ್ರಾಂತಿವರೆಗೂ ಅಡುಗೆ ಮನೆಗಳಲ್ಲಿ ಅವರೆಕಾಯಯದೇ ಕಾರುಬಾರು. ಇದು ದೇಹದ ಉಷ್ಣತೆ ಹೆಚ್ಚಿಸಲಿದೆ. ಹೀಗಾಗಿ ಚಳಿಯ ಋತುಮಾನದ ಬೆಳೆಗಳಲ್ಲಿ ಒಂದಾದ ಅವರೆಯನ್ನು ತಿಂಡಿ, ಊಟಕ್ಕೆ ಪ್ರಜ್ಞಾಪೂರ್ವಕವಾಗಿ ಬಳಕೆ ಮಾಡಲಾಗುತ್ತದೆ ಎಂದು ಪಾಕಪ್ರವೀಣರೊಬ್ಬರು ಮಾಹಿತಿ ನೀಡಿದರು.


ತಳ್ಳುಗಾಡಿಗಳಲ್ಲಿ ಮಾರಾಟ, ಬೇಡಿಕೆ
ಹೊರಗಿನಿಂದ ಮತ್ತು ಸ್ಥಳೀಯವಾಗಿ ಮಾರುಕಟ್ಟೆಗೆ ಬಂದಿರುವ ಅವರೆಕಾಯಿಯನ್ನು ರಸ್ತೆಬದಿ ವ್ಯಾಪಾರಿಗಳು ಮತ್ತು ತಳ್ಳುಗಾಡಿಯವರು ನಗರದ ವಿವಿಧೆಡೆ ಮಾರಾಟ ಮಾಡುತ್ತಿದ್ದುದು ಕಂಡುಬಂದಿತು. ಷಷ್ಠಿ ಹಬ್ಬದಂದು ಬೆಳಿಗ್ಗೆ ಅವರೆಕಾಯಿ ಉಪ್ಪಿಟ್ಟು, ಕೋಸಂಬರಿ, ಪಂಚಾಮೃತ ಮಾಡಲಾಗುತ್ತದೆ. ಅಲ್ಲದೆ ಅವರೆ ಸಾಂಬಾರು ಮಾಡಿ ಸವಿಯಲಾಗುತ್ತದೆ. ಹೀಗಾಗಿ ಅವರೆಕಾಯಿಗೆ ಬೇಡಿಕೆ ಕಂಡುಬಂದಿತು.


ಜಿಲ್ಲೆಯಲ್ಲಿ ೧೫೧೦ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಅವರೆ ಬೆಳೆ ಬೆಳೆಯಲಾಗಿದ್ದು ಅಲ್ಲಲ್ಲಿ ಈಗ ಕೊಯ್ಲು ಪ್ರಾರಂಭವಾಗಿದೆ. ಕೊಳ್ಳೇಗಾಲ, ಹನೂರು ತಾಲ್ಲೂಕಿನಲ್ಲಿ ಹೆಚ್ಚು ಬೆಳೆ ಇದೆ. ಕಳೆದ ಮುಂಗಾರಿಗೆ ಹೋಲಿಸಿದರೆ ಈ ಬಾರಿ ಅವರೆ ಬೆಳೆ ಜಾಸ್ತಿ ಇದೆ.
-ಕೆ.ಮಧುಸೂದನ್, ಜಂಟಿ ಕೃಷಿ ನಿರ್ದೇಶಕರು.

andolanait

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

1 hour ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

4 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

6 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago