ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ರಾಷ್ಟಿçÃಯ ಹೆದ್ದಾರಿ ೨೦೯ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುವೆ.
ಈ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿAದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಇದರಿಂದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ೧೯೮೮ರ ಸೆಕ್ಷನ್ ೧೧೫, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-೧೯೮೯ರ ನಿಯಮ ೨೨೧-ಎ(೫)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ೧೯೬೦ರ ಸೆಕ್ಷನ್ ೩ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…