ಜಿಲ್ಲೆಗಳು

ಚಾ.ನಗರ : ಭಾರಿ ವಾಹನಗಳ ಸಂಚಾರ ನಿರ್ಬಂಧ

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್‌ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ರಾಷ್ಟಿçÃಯ ಹೆದ್ದಾರಿ ೨೦೯ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುವೆ.
ಈ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್‌ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿAದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಇದರಿಂದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ೧೯೮೮ರ ಸೆಕ್ಷನ್ ೧೧೫, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-೧೯೮೯ರ ನಿಯಮ ೨೨೧-ಎ(೫)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ೧೯೬೦ರ ಸೆಕ್ಷನ್ ೩ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

10 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

10 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

10 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

10 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago