ಜಿಲ್ಲೆಗಳು

ಚಾ.ನಗರ : ಭಾರಿ ವಾಹನಗಳ ಸಂಚಾರ ನಿರ್ಬಂಧ

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್‌ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ರಾಷ್ಟಿçÃಯ ಹೆದ್ದಾರಿ ೨೦೯ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುವೆ.
ಈ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್‌ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿAದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಇದರಿಂದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ೧೯೮೮ರ ಸೆಕ್ಷನ್ ೧೧೫, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-೧೯೮೯ರ ನಿಯಮ ೨೨೧-ಎ(೫)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ೧೯೬೦ರ ಸೆಕ್ಷನ್ ೩ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

52 mins ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

4 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

4 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

4 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

4 hours ago