ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ: ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಚಾ.ನಗರ ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸೂಕ್ತ ರೀತಿಯ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.
ಜ್ಯೋತಿ ಗೌಡನಪುರ ಗ್ರಾಮದ ಗ್ರಾ.ಪಂ ಕಟ್ಟಡದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ವಿ.ಸೋಮಣ್ಣ
ಮಳೆ ನೀರು ನುಗ್ಗಿ ಹಾನಿಯಾಗಿರುವ ಒಟ್ಟು ೫೨೭ ಮನೆಗಳಿಗೂ ಕೂಡಲೇ ೧೦ ಸಾವಿರ ರೂ ವಿತರಿಸಿ ಅಷ್ಟೂ ಕುಟುಂಬಗಳಿಗೂ ಕೂಡಲೇ ಆಹಾರ ಕಿಟ್ ವಿತರಣೆ ಮಾಡಬೇಕು. ಅಧಿಕಾರಿಗಳು ಗೋಡೆ ಕುಸಿದಿರುವ ೬೬ ಮನೆಗಳಿಗೆ ಭೇಟಿ ನೀಡಿ ೫೦ ಸಾವಿರ ಪರಿಹಾರ ನೀಡಬೇಕು ತುಂಬಾ ತೊಂದರೆ ಆಗಿದ್ದಲ್ಲಿ ತಲಾ ೩.೫ ಲಕ್ಷ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ತರಾಟೆ: ಜ್ಯೋತಿ ಗೌಡನಪುರ ಗ್ರಾ.ಪಂ ಕಟ್ಟಡದಲ್ಲಿ ಸಭೆ ನಡೆಯುವ ಸಂದರ್ಭದಲ್ಲಿ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ ಮಾಡಲು ತಿಳಿಸಿದರು. ಮಧ್ಯೆ ಪ್ರವೇಶಿಸಿದ ತಹಶೀಲ್ದಾರ್ ಅವರು ಈಗಾಗಲೇ ೫೦೦ ಕಿಟ್ ವಿತರಣೆ ಮಾಡಲಾಗಿದೆ ಪರಿಶೀಲಿಸಿ ಉಳಿದವರಿಗೆ ನೀಡುತ್ತೇವೆ ಎಂದರು. ಈ ವೇಳೆ ಸಚಿವ ವಿ.ಸೊಮಣ್ಣ ಅವರು ಗರಂ ಆಗಿ ಪರಿಶೀಲನೆ ನಂತರ ಇಟ್ಟುಕೊಳ್ಳಿ ಎಲ್ಲರಿಗೂ ಆಹಾರ ಕಿಟ್ ವಿತರಿಸುತ್ತೀರೋ ಇಲ್ಲವೋ ಎಂದು ಗದರಿದರು.
ಕಾಡಾ ಅಧ್ಯಕ್ಷರ ವಿರುದ್ಧ ಅಸಮಾಧಾನ: ಸಚಿವ ವಿ.ಸೋಮಣ್ಣ ಅವರು ನೆರೆ ಸಂತ್ರಸ್ತರ ದುಃಖ ದುಮ್ಮಾನ ವಿಚಾರಿಸುವ ವೇಳೆ ಪಕ್ಷದ ಕಾರ್ಯಕರ್ತರೊಬ್ಬರು ಕಾಡಾ ಅಧ್ಯಕ್ಷರು ಕಾಟಾಚಾರಕ್ಕೆ ಭೇಟಿ ನೀಡಿದರು ಎಂದು ಸಚಿವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿ ಸಂಜೆಯಾದರೂ ಯಾವ ಅಧಿಕಾರಿಗಳು ಭೇಟಿ ನೀಡಿರಲಿಲ್ಲ , ಸಂಜೆಯೊತ್ತಿಗೆ ಭೇಟಿ ನೀಡಿದ ಕಾಡಾ ಅಧ್ಯಕ್ಷರಾದ ನಿಜಗುಣರಾಜು ಅವರು ೫೦೦ ಆಹಾರ ಕಿಟ್ ಹಾಗೂ ೫೦೦ ಹೊದಿಕೆ ಕಳುಹಿಸಿಕೊಡುವುದಾಗಿ ಆಶ್ವಾಸನೆ ನೀಡಿ ಹೋದವರು ಈ ಕಡೆ ತಲೆ ಹಾಕಲಿಲ್ಲ, ಅಮ್ಮನಪುರ ಮಲ್ಲೇಶ್ ಅವರು ಇಂತಿಷ್ಟು ಪರಿಹಾರ ನೀಡಲಿಲ್ಲ ಅಂದರೆ ನಾವು ಪಕ್ಷದ ಹೆಸರು ಹೇಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಎಸ್ಪಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ಎಎಸ್ಪಿ ಸುಂದರ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…