ಜಿಲ್ಲೆಗಳು

ಚಾ.ನಗರ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ವಿ. ಸೋಮಣ್ಣ

  • ಮಳೆ ಹಾನಿಯ ವಿವಿಧ ಪ್ರದೇಶಗಳಿಗೆ ಸಚಿವ ವಿ ಸೋಮಣ್ಣ ಭೇಟಿ.
  • ಪರಿಹಾರದ ಭರವಸೆ, ಅಧಿಕಾರಿಗಳಿಗೆ ತರಾಟೆ.

ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ: ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಚಾ.ನಗರ ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸೂಕ್ತ ರೀತಿಯ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.

ಚಾ.ನಗರ ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಸತತ ಮಳೆಯಿಂದಾಗಿ ಸಮೀಪದ ಕೆರೆಕಟ್ಟೆಗಳು ಕೋಡಿ ಬಿದ್ದು ಗ್ರಾಮವೇ ಜಲಾವೃತವಾಗಿತ್ತು ಈ ಸಂದರ್ಭದಲ್ಲಿ ಗ್ರಾಮದಲ್ಲಿರುವ ಒಟ್ಟು ೯೯೮ ಕುಟುಂಬಗಳಲ್ಲಿ ೫೨೭ ಮನೆಗಳಿಗೆ ನೀರು ನುಗ್ಗಿ ಅಸ್ತವ್ಯಸ್ತವಾದರೆ, ೬೬ ಮನೆಗಳ ಗೋಡೆ ಕುಸಿದು ಸಾರ್ವಜನಿಕರ ಬದುಕು ದುಸ್ತರವಾಗಿತ್ತು.

 

 

ಜ್ಯೋತಿ ಗೌಡನಪುರ ಗ್ರಾಮದ ಗ್ರಾ.ಪಂ ಕಟ್ಟಡದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ವಿ.ಸೋಮಣ್ಣ
ಮಳೆ ನೀರು ನುಗ್ಗಿ ಹಾನಿಯಾಗಿರುವ ಒಟ್ಟು ೫೨೭ ಮನೆಗಳಿಗೂ ಕೂಡಲೇ ೧೦ ಸಾವಿರ ರೂ ವಿತರಿಸಿ ಅಷ್ಟೂ ಕುಟುಂಬಗಳಿಗೂ ಕೂಡಲೇ ಆಹಾರ ಕಿಟ್ ವಿತರಣೆ ಮಾಡಬೇಕು. ಅಧಿಕಾರಿಗಳು ಗೋಡೆ ಕುಸಿದಿರುವ ೬೬ ಮನೆಗಳಿಗೆ ಭೇಟಿ ನೀಡಿ ೫೦ ಸಾವಿರ ಪರಿಹಾರ ನೀಡಬೇಕು ತುಂಬಾ ತೊಂದರೆ ಆಗಿದ್ದಲ್ಲಿ ತಲಾ ೩.೫ ಲಕ್ಷ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.

 ಅಧಿಕಾರಿಗಳಿಗೆ ತರಾಟೆ: ಜ್ಯೋತಿ ಗೌಡನಪುರ ಗ್ರಾ.ಪಂ ಕಟ್ಟಡದಲ್ಲಿ ಸಭೆ ನಡೆಯುವ ಸಂದರ್ಭದಲ್ಲಿ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ ಮಾಡಲು ತಿಳಿಸಿದರು. ಮಧ್ಯೆ ಪ್ರವೇಶಿಸಿದ ತಹಶೀಲ್ದಾರ್ ಅವರು ಈಗಾಗಲೇ ೫೦೦ ಕಿಟ್ ವಿತರಣೆ ಮಾಡಲಾಗಿದೆ ಪರಿಶೀಲಿಸಿ ಉಳಿದವರಿಗೆ ನೀಡುತ್ತೇವೆ ಎಂದರು. ಈ ವೇಳೆ ಸಚಿವ ವಿ.ಸೊಮಣ್ಣ ಅವರು ಗರಂ ಆಗಿ ಪರಿಶೀಲನೆ ನಂತರ ಇಟ್ಟುಕೊಳ್ಳಿ ಎಲ್ಲರಿಗೂ ಆಹಾರ ಕಿಟ್ ವಿತರಿಸುತ್ತೀರೋ ಇಲ್ಲವೋ ಎಂದು ಗದರಿದರು.

ಕಾಡಾ ಅಧ್ಯಕ್ಷರ ವಿರುದ್ಧ ಅಸಮಾಧಾನ: ಸಚಿವ ವಿ.ಸೋಮಣ್ಣ ಅವರು ನೆರೆ ಸಂತ್ರಸ್ತರ ದುಃಖ ದುಮ್ಮಾನ ವಿಚಾರಿಸುವ ವೇಳೆ ಪಕ್ಷದ ಕಾರ್ಯಕರ್ತರೊಬ್ಬರು ಕಾಡಾ ಅಧ್ಯಕ್ಷರು ಕಾಟಾಚಾರಕ್ಕೆ ಭೇಟಿ ನೀಡಿದರು ಎಂದು ಸಚಿವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿ ಸಂಜೆಯಾದರೂ ಯಾವ ಅಧಿಕಾರಿಗಳು ಭೇಟಿ ನೀಡಿರಲಿಲ್ಲ , ಸಂಜೆಯೊತ್ತಿಗೆ ಭೇಟಿ ನೀಡಿದ ಕಾಡಾ ಅಧ್ಯಕ್ಷರಾದ ನಿಜಗುಣರಾಜು ಅವರು ೫೦೦ ಆಹಾರ ಕಿಟ್ ಹಾಗೂ ೫೦೦ ಹೊದಿಕೆ ಕಳುಹಿಸಿಕೊಡುವುದಾಗಿ ಆಶ್ವಾಸನೆ ನೀಡಿ ಹೋದವರು ಈ ಕಡೆ ತಲೆ ಹಾಕಲಿಲ್ಲ, ಅಮ್ಮನಪುರ ಮಲ್ಲೇಶ್ ಅವರು ಇಂತಿಷ್ಟು ಪರಿಹಾರ ನೀಡಲಿಲ್ಲ ಅಂದರೆ ನಾವು ಪಕ್ಷದ ಹೆಸರು ಹೇಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಎಸ್ಪಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ಎಎಸ್ಪಿ ಸುಂದರ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

1 hour ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

2 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

2 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

2 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

2 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

2 hours ago