ಜಿಲ್ಲೆಗಳು

ಚಾ.ನಗರ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ವಿ. ಸೋಮಣ್ಣ

  • ಮಳೆ ಹಾನಿಯ ವಿವಿಧ ಪ್ರದೇಶಗಳಿಗೆ ಸಚಿವ ವಿ ಸೋಮಣ್ಣ ಭೇಟಿ.
  • ಪರಿಹಾರದ ಭರವಸೆ, ಅಧಿಕಾರಿಗಳಿಗೆ ತರಾಟೆ.

ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ: ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಚಾ.ನಗರ ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸೂಕ್ತ ರೀತಿಯ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.

ಚಾ.ನಗರ ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಸತತ ಮಳೆಯಿಂದಾಗಿ ಸಮೀಪದ ಕೆರೆಕಟ್ಟೆಗಳು ಕೋಡಿ ಬಿದ್ದು ಗ್ರಾಮವೇ ಜಲಾವೃತವಾಗಿತ್ತು ಈ ಸಂದರ್ಭದಲ್ಲಿ ಗ್ರಾಮದಲ್ಲಿರುವ ಒಟ್ಟು ೯೯೮ ಕುಟುಂಬಗಳಲ್ಲಿ ೫೨೭ ಮನೆಗಳಿಗೆ ನೀರು ನುಗ್ಗಿ ಅಸ್ತವ್ಯಸ್ತವಾದರೆ, ೬೬ ಮನೆಗಳ ಗೋಡೆ ಕುಸಿದು ಸಾರ್ವಜನಿಕರ ಬದುಕು ದುಸ್ತರವಾಗಿತ್ತು.

 

 

ಜ್ಯೋತಿ ಗೌಡನಪುರ ಗ್ರಾಮದ ಗ್ರಾ.ಪಂ ಕಟ್ಟಡದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ವಿ.ಸೋಮಣ್ಣ
ಮಳೆ ನೀರು ನುಗ್ಗಿ ಹಾನಿಯಾಗಿರುವ ಒಟ್ಟು ೫೨೭ ಮನೆಗಳಿಗೂ ಕೂಡಲೇ ೧೦ ಸಾವಿರ ರೂ ವಿತರಿಸಿ ಅಷ್ಟೂ ಕುಟುಂಬಗಳಿಗೂ ಕೂಡಲೇ ಆಹಾರ ಕಿಟ್ ವಿತರಣೆ ಮಾಡಬೇಕು. ಅಧಿಕಾರಿಗಳು ಗೋಡೆ ಕುಸಿದಿರುವ ೬೬ ಮನೆಗಳಿಗೆ ಭೇಟಿ ನೀಡಿ ೫೦ ಸಾವಿರ ಪರಿಹಾರ ನೀಡಬೇಕು ತುಂಬಾ ತೊಂದರೆ ಆಗಿದ್ದಲ್ಲಿ ತಲಾ ೩.೫ ಲಕ್ಷ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.

 ಅಧಿಕಾರಿಗಳಿಗೆ ತರಾಟೆ: ಜ್ಯೋತಿ ಗೌಡನಪುರ ಗ್ರಾ.ಪಂ ಕಟ್ಟಡದಲ್ಲಿ ಸಭೆ ನಡೆಯುವ ಸಂದರ್ಭದಲ್ಲಿ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ ಮಾಡಲು ತಿಳಿಸಿದರು. ಮಧ್ಯೆ ಪ್ರವೇಶಿಸಿದ ತಹಶೀಲ್ದಾರ್ ಅವರು ಈಗಾಗಲೇ ೫೦೦ ಕಿಟ್ ವಿತರಣೆ ಮಾಡಲಾಗಿದೆ ಪರಿಶೀಲಿಸಿ ಉಳಿದವರಿಗೆ ನೀಡುತ್ತೇವೆ ಎಂದರು. ಈ ವೇಳೆ ಸಚಿವ ವಿ.ಸೊಮಣ್ಣ ಅವರು ಗರಂ ಆಗಿ ಪರಿಶೀಲನೆ ನಂತರ ಇಟ್ಟುಕೊಳ್ಳಿ ಎಲ್ಲರಿಗೂ ಆಹಾರ ಕಿಟ್ ವಿತರಿಸುತ್ತೀರೋ ಇಲ್ಲವೋ ಎಂದು ಗದರಿದರು.

ಕಾಡಾ ಅಧ್ಯಕ್ಷರ ವಿರುದ್ಧ ಅಸಮಾಧಾನ: ಸಚಿವ ವಿ.ಸೋಮಣ್ಣ ಅವರು ನೆರೆ ಸಂತ್ರಸ್ತರ ದುಃಖ ದುಮ್ಮಾನ ವಿಚಾರಿಸುವ ವೇಳೆ ಪಕ್ಷದ ಕಾರ್ಯಕರ್ತರೊಬ್ಬರು ಕಾಡಾ ಅಧ್ಯಕ್ಷರು ಕಾಟಾಚಾರಕ್ಕೆ ಭೇಟಿ ನೀಡಿದರು ಎಂದು ಸಚಿವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸಿ ಸಂಜೆಯಾದರೂ ಯಾವ ಅಧಿಕಾರಿಗಳು ಭೇಟಿ ನೀಡಿರಲಿಲ್ಲ , ಸಂಜೆಯೊತ್ತಿಗೆ ಭೇಟಿ ನೀಡಿದ ಕಾಡಾ ಅಧ್ಯಕ್ಷರಾದ ನಿಜಗುಣರಾಜು ಅವರು ೫೦೦ ಆಹಾರ ಕಿಟ್ ಹಾಗೂ ೫೦೦ ಹೊದಿಕೆ ಕಳುಹಿಸಿಕೊಡುವುದಾಗಿ ಆಶ್ವಾಸನೆ ನೀಡಿ ಹೋದವರು ಈ ಕಡೆ ತಲೆ ಹಾಕಲಿಲ್ಲ, ಅಮ್ಮನಪುರ ಮಲ್ಲೇಶ್ ಅವರು ಇಂತಿಷ್ಟು ಪರಿಹಾರ ನೀಡಲಿಲ್ಲ ಅಂದರೆ ನಾವು ಪಕ್ಷದ ಹೆಸರು ಹೇಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಎಸ್ಪಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ಎಎಸ್ಪಿ ಸುಂದರ್ ರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago