ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.16 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 7 ಗಂಟೆಯ ವರೆಗೂ ನಡೆಯಿತು.
ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್ ಬಿಐ ಬ್ಯಾಂಕ್ ನೌಕರರು ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…