ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ: ಪ್ರೊ.ಮೊರಬದ ಮಲ್ಲಿಕಾರ್ಜುನ
ಮೈಸೂರು: ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ ಎಂದು ಜೆಎಸ್ಎಸ್ ಮಹಾವಿದ್ಯಾಪೀಠ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ರಂಗಾಯಣ, ಸಂವಹನ ಪ್ರಕಾಶನ, ಕನ್ನಡ ಸಾಹಿತ್ಯ ಕಲಾ ಕೂಟದ ಸಹಯೋಗದಲ್ಲಿ ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಿ.ಚಾಮಶೆಟ್ಟಿ ರಚನೆಯ ‘ನಾಟಕ ಚಕ್ರ’, ‘ಹನುಮನ ಸೀತಾನ್ವೇಷಣೆ ಮತ್ತು ಸಂತ ರವಿದಾಸರು’, ‘ಸಮನ್ವಿತ’, ‘ತ್ರಿವರ್ಣ ಕಾವ್ಯ ಸಂಕಲನ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಆಧ್ಯಾತ್ಮಿಕತೆಗೆ ಯಾವುದೇ ಗಡಿ, ಗೆರೆಗಳು ಇಲ್ಲ. ಚಾಮಶೆಟ್ಟಿ ಅವರ ಕೃತಿಗಳು ಪ್ರತಿಯೊಬ್ಬರನ್ನು ಆಧ್ಯಾತ್ಮಿಕತೆ ಕಡೆಗೆ ಸೆಳೆಯುವಂತೆ ಮಾಡುತ್ತವೆ. ಇಂದಿನ ಹಲವು ತಲ್ಲಣಗಳಿಂದ ಹೊರ ಬರಲು ಈ ಕೃತಿಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ರಂಗ ಕಲಾವಿದ ಎಲ್.ಮಲ್ಲಶೆಟ್ಟಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಪ್ರಕಾಶಕ ಡಿ.ಎನ್.ಲೋಕಪ್ಪ, ಹಿರಿಯ ರಂಗಕರ್ಮಿ ಡಾ.ಎಚ್.ಎ.ಪಾರ್ಶ್ವನಾಥ್, ಕವಯತ್ರಿ ಎನ್.ಕೆರೋಡಿ ಲೋಲಾಕ್ಷಿ ಇತರರು ಹಾಜರಿದ್ದರು.
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…