ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ: ಪ್ರೊ.ಮೊರಬದ ಮಲ್ಲಿಕಾರ್ಜುನ
ಮೈಸೂರು: ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ ಎಂದು ಜೆಎಸ್ಎಸ್ ಮಹಾವಿದ್ಯಾಪೀಠ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ರಂಗಾಯಣ, ಸಂವಹನ ಪ್ರಕಾಶನ, ಕನ್ನಡ ಸಾಹಿತ್ಯ ಕಲಾ ಕೂಟದ ಸಹಯೋಗದಲ್ಲಿ ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಿ.ಚಾಮಶೆಟ್ಟಿ ರಚನೆಯ ‘ನಾಟಕ ಚಕ್ರ’, ‘ಹನುಮನ ಸೀತಾನ್ವೇಷಣೆ ಮತ್ತು ಸಂತ ರವಿದಾಸರು’, ‘ಸಮನ್ವಿತ’, ‘ತ್ರಿವರ್ಣ ಕಾವ್ಯ ಸಂಕಲನ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಆಧ್ಯಾತ್ಮಿಕತೆಗೆ ಯಾವುದೇ ಗಡಿ, ಗೆರೆಗಳು ಇಲ್ಲ. ಚಾಮಶೆಟ್ಟಿ ಅವರ ಕೃತಿಗಳು ಪ್ರತಿಯೊಬ್ಬರನ್ನು ಆಧ್ಯಾತ್ಮಿಕತೆ ಕಡೆಗೆ ಸೆಳೆಯುವಂತೆ ಮಾಡುತ್ತವೆ. ಇಂದಿನ ಹಲವು ತಲ್ಲಣಗಳಿಂದ ಹೊರ ಬರಲು ಈ ಕೃತಿಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ರಂಗ ಕಲಾವಿದ ಎಲ್.ಮಲ್ಲಶೆಟ್ಟಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಪ್ರಕಾಶಕ ಡಿ.ಎನ್.ಲೋಕಪ್ಪ, ಹಿರಿಯ ರಂಗಕರ್ಮಿ ಡಾ.ಎಚ್.ಎ.ಪಾರ್ಶ್ವನಾಥ್, ಕವಯತ್ರಿ ಎನ್.ಕೆರೋಡಿ ಲೋಲಾಕ್ಷಿ ಇತರರು ಹಾಜರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…