ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ: ಪ್ರೊ.ಮೊರಬದ ಮಲ್ಲಿಕಾರ್ಜುನ
ಮೈಸೂರು: ಆಧ್ಯಾತ್ಮಿಕ ಲೋಕ ಕ್ರೋಢಿಕರಿಸುವ ಲೋಕ, ದೂರಿಕರಿಸುವ ಲೋಕವಲ್ಲ ಎಂದು ಜೆಎಸ್ಎಸ್ ಮಹಾವಿದ್ಯಾಪೀಠ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ರಂಗಾಯಣ, ಸಂವಹನ ಪ್ರಕಾಶನ, ಕನ್ನಡ ಸಾಹಿತ್ಯ ಕಲಾ ಕೂಟದ ಸಹಯೋಗದಲ್ಲಿ ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಿ.ಚಾಮಶೆಟ್ಟಿ ರಚನೆಯ ‘ನಾಟಕ ಚಕ್ರ’, ‘ಹನುಮನ ಸೀತಾನ್ವೇಷಣೆ ಮತ್ತು ಸಂತ ರವಿದಾಸರು’, ‘ಸಮನ್ವಿತ’, ‘ತ್ರಿವರ್ಣ ಕಾವ್ಯ ಸಂಕಲನ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಆಧ್ಯಾತ್ಮಿಕತೆಗೆ ಯಾವುದೇ ಗಡಿ, ಗೆರೆಗಳು ಇಲ್ಲ. ಚಾಮಶೆಟ್ಟಿ ಅವರ ಕೃತಿಗಳು ಪ್ರತಿಯೊಬ್ಬರನ್ನು ಆಧ್ಯಾತ್ಮಿಕತೆ ಕಡೆಗೆ ಸೆಳೆಯುವಂತೆ ಮಾಡುತ್ತವೆ. ಇಂದಿನ ಹಲವು ತಲ್ಲಣಗಳಿಂದ ಹೊರ ಬರಲು ಈ ಕೃತಿಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ರಂಗ ಕಲಾವಿದ ಎಲ್.ಮಲ್ಲಶೆಟ್ಟಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಪ್ರಕಾಶಕ ಡಿ.ಎನ್.ಲೋಕಪ್ಪ, ಹಿರಿಯ ರಂಗಕರ್ಮಿ ಡಾ.ಎಚ್.ಎ.ಪಾರ್ಶ್ವನಾಥ್, ಕವಯತ್ರಿ ಎನ್.ಕೆರೋಡಿ ಲೋಲಾಕ್ಷಿ ಇತರರು ಹಾಜರಿದ್ದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…