ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಆಕರ್ಷಣೀಯ ಪ್ರದರ್ಶನವನ್ನು ಕಂಡ ಸಚಿವರು  ಸಂತಸ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧೀಜಿ, ರಾಮಮಂದಿರದ ವಿನ್ಯಾಸ, ರಾಮಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆಯ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ‌.

ಜನ ಸಾಮಾನ್ಯರು, ಪರಿಶಿಷ್ಟರ‌ ಜಾತಿ/ವರ್ಗದ ಹಾಗೂ ಹಿಂದುಳಿದ ವರ್ಗಗಳ ಕನಿಷ್ಠ ಅವಶ್ಯಕತೆಗಳನ್ನು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಐದು ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ವಿನೂತನ ಮಾದರಿಯಲ್ಲಿದ್ದು ಜನ ಸಾಮಾನ್ಯರು ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿ ಗಮನ ಸೆಳೆಯುತ್ತಿದ್ದಾರೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಾಹಕ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

13 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

36 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago