ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಆಕರ್ಷಣೀಯ ಪ್ರದರ್ಶನವನ್ನು ಕಂಡ ಸಚಿವರು  ಸಂತಸ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧೀಜಿ, ರಾಮಮಂದಿರದ ವಿನ್ಯಾಸ, ರಾಮಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆಯ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ‌.

ಜನ ಸಾಮಾನ್ಯರು, ಪರಿಶಿಷ್ಟರ‌ ಜಾತಿ/ವರ್ಗದ ಹಾಗೂ ಹಿಂದುಳಿದ ವರ್ಗಗಳ ಕನಿಷ್ಠ ಅವಶ್ಯಕತೆಗಳನ್ನು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಐದು ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ವಿನೂತನ ಮಾದರಿಯಲ್ಲಿದ್ದು ಜನ ಸಾಮಾನ್ಯರು ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿ ಗಮನ ಸೆಳೆಯುತ್ತಿದ್ದಾರೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಾಹಕ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

6 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

8 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

13 hours ago