ಜಿಲ್ಲೆಗಳು

ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಆಕರ್ಷಣೀಯ ಪ್ರದರ್ಶನವನ್ನು ಕಂಡ ಸಚಿವರು  ಸಂತಸ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧೀಜಿ, ರಾಮಮಂದಿರದ ವಿನ್ಯಾಸ, ರಾಮಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ಅರಣ್ಯ ಇಲಾಖೆಯ ಪಕ್ಷಿಧಾಮ, ಕೃಷಿ ಇಲಾಖೆಯ ಸುಗ್ಗಿ ಹಬ್ಬ, 20 ಸಾವಿರಕ್ಕೂ ಹೆಚ್ಚು ಹೂ ಬಳಸಿ ನಿರ್ಮಿಸಿರುವ ಕಲಕೃತಿಗಳು, ಹೂಕುಂಡುಗಳು ಸಸ್ಯಕಾಶಿ ಮಾದರಿಯಲ್ಲಿ ಸೂರ್ಯನಿಗೆ ಮೈಯೊಡ್ಡಿ ನಿಂತಿವೆ. ನಾಡಿನ ಅನ್ನದಾತನ ಮಾದರಿ, ಎತ್ತಿನಗಾಡಿ, ಹಸು, ರೈತನ ಮಾದರಿಗಳು ಎಲ್ಲರ ಗಮನ ಸೆಳೆಯುತ್ತಿವೆ‌.

ಜನ ಸಾಮಾನ್ಯರು, ಪರಿಶಿಷ್ಟರ‌ ಜಾತಿ/ವರ್ಗದ ಹಾಗೂ ಹಿಂದುಳಿದ ವರ್ಗಗಳ ಕನಿಷ್ಠ ಅವಶ್ಯಕತೆಗಳನ್ನು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಐದು ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ವಿನೂತನ ಮಾದರಿಯಲ್ಲಿದ್ದು ಜನ ಸಾಮಾನ್ಯರು ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿ ಗಮನ ಸೆಳೆಯುತ್ತಿದ್ದಾರೆ.
ವಿವಿಧ ಇಲಾಖೆಗಳು ಜನ ಸಮಾನ್ಯರಿಗೆ ನೀಡುವ ಸೌಲಭ್ಯಗಳ ಬಗ್ಗೆ ವಸ್ತುಪ್ರದರ್ಶನ ಮಳಿಗೆಗಳು ಅನಾವರಣಗೊಳಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಾಹಕ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago