ಜಿಲ್ಲೆಗಳು

ಚಾಮರಾಜನಗರ : ಪೊಲೀಸ್ ಕಾನ್ಸ್‌ಟೇಬಲ್  ಸಾವಿಗೆ ಯತ್ನ

ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.ವರ್ಗಾವಣೆಯಿಂದ ಮನನೊಂದು ಈ ಯತ್ನ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

ಸಾವಿಗೆ ಯತ್ನಿಸಿದ ಮಹೇಶ್‌ ರವರ ಕೈ- ಕಾಲು, ಪಕ್ಕೆಲುಬುಗಳಲ್ಲಿ ಸುಟ್ಟಗಾಯಗಳಾಗಿದ್ದು ಸದ್ಯ ಅವರನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಎಸ್​ಪಿ ಶಿವಕುಮಾರ್ ರವರು ಮಹೇಶ್‌ ರವರು ಯಾವ ಕಾರಣಕ್ಕಾಗಿ ಸಾವಿಗೆ ಯತ್ನಿಸಿದ್ದಾರೆಂಬುದರ ಬಗ್ಗೆ ತಿಳಿದಿಲ್ಲ, ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 mins ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

27 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

2 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

7 hours ago