ಜಿಲ್ಲೆಗಳು

ಚಾಮರಾಜನಗರ: ರೇಷ್ಮೆ ಮಾರುಕಟ್ಟೆ ಜಾಗ ಕಾಯ್ದಿರಿಸಿ ಆದೇಶ

ಹೈಟೆಕ್ ನಿಲ್ದಾಣಕ್ಕೆ ೨.೩೦ಎಕರೆ ಜಾಗ ಕೊನೆಗೂ ಅಸ್ತು

ಚಾಮರಾಜನಗರ: ಚಾಮರಾಜನಗರದಲ್ಲಿ ಹೈಟೆಕ್ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಇದ್ದ ಜಾಗದ ಸಮಸ್ಯೆ ಕೊನೆಗೂ ಬಗೆಹರಿದಿದೆ. ಇಲ್ಲಿನ ರೇಷ್ಮೆ ವಾರುಕಟ್ಟೆಯ(ಸಂತೇಮರಹಳ್ಳಿ ರಸ್ತೆ) ೨.೩೦ ಎಕರೆ ಜಾಗವನ್ನು ನಿಲ್ದಾಣಕ್ಕೆ ಕಾಯ್ದಿರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ಹೆಸರಿಗೆ ಜಾಗ ಹಸ್ತಾಂತರಿಸಿಕೊಡುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ವಾಡಿರುವುದಾಗಿ ಚಾಮರಾಜನಗರ ಸಾರಿಗೆ ವಿಭಾಗೀುಂ ನಿುಂಂತ್ರಣಾಧಿಕಾರಿ ಶ್ರೀನಿವಾಸ್ ಪತ್ರಿಕೆಗೆ ತಿಳಿಸಿದರು.

ನಿಲ್ದಾಣಕ್ಕೆ ಕಾಯ್ದಿರಿಸುವ ಜಾಗ ಉದ್ದೇಶಿತ ಕಾನೂನು ಕಾಲೇಜಿನ ಕಟ್ಟಡ ಬಳಿ ಇದೆ. ಡೀವಿಯೇಷನ್ ರಸ್ತೆಯಲ್ಲಿ ಹಾಲಿ ಇರುವ ಬಸ್ ನಿಲ್ದಾಣ ಜಿಲ್ಲಾ ಕೇಂದ್ರಕ್ಕೆ ಸೂಕ್ತವಾಗಿಲ್ಲ. ಆದ ಕಾರಣ ವಿಶಾಲ ನಿಲ್ದಾಣ ವಾಡುವ ದಿಸೆುಂಲ್ಲಿ ಸುವಾರು ವರ್ಷಗಳಿಂದ ರೇಷ್ಮೆ ಇಲಾಖೆಗೆ ಸೇರಿದ ಈ ಜಾಗ ಪಡೆುಂಲು ಪ್ರುಂತ್ನ ನಡೆಯುತ್ತಲೇ ಇತ್ತು. ಒಂದು ಹಂತದಲ್ಲಿ ರೇಷ್ಮೆ ಇಲಾಖೆ ಈ ಜಾಗ ನೀಡಲು ಸ್ಪಷ್ಟವಾಗಿ ನಿರಾಕರಿಸಿತ್ತು. ನಿರೀಕ್ಷಿಸಿದ್ದ ಕಡೆಯೇ ತಡವಾಗಿಯಾದರೂ ಜಾಗ ದೊರಕಿದೆ.

ಈಗಿನ ಸಾರಿಗೆ ಬಸ್ ನಿಲ್ದಾಣವನ್ನು ಭವಿಷ್ಯದಲ್ಲಿ ಗ್ರಾವಾಂತರ ಬಸ್ ನಿಲ್ದಾಣವಾಗಿ ಪರಿವರ್ತಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ನಿಲ್ದಾಣವನ್ನು ತೀರಾ ಹೊರಭಾಗದಲ್ಲಿ ವಾಡಿದರೆ ಅದರಿಂದ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು ಎಂಬ ಮುನ್ನೆಚ್ಚರಿಕೆ ವಹಿಸಿ ರೇಷ್ಮೆ ಇಲಾಖೆ ಜಾಗವನ್ನು ಹಠಕ್ಕೆ ಬಿದ್ದವರಂತೆ ಪಡೆಯಲಾಗಿದೆ. ಜಾಗ ಸಂಸ್ಥೆ ಹೆಸರಿಗೆ ಹಸ್ತಾಂತರ ಆದ ಮೇಲೆ ಹೊಸ ನಿಲ್ದಾಣದ ಪ್ಲಾನ್-ಅಂದಾಜು ಪಟ್ಟಿ ಸಿದ್ಧಪಡಿಸಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಇಲಾಖೆುಂ ಮೂಲಗಳು ತಿಳಿಸಿವೆ.

ಬಿ.ರಂ.ಬೆಟ್ಟದಲ್ಲೂ ನಿಲ್ದಾಣ

ಪ್ರಸಿದ್ಧ ಯಾತ್ರಾಸ್ಥಳ ಯಳಂದೂರು ತಾಲ್ಲೂಕು ಬಿಳಿಗಿರಿರಂಗನಬೆಟ್ಟದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಿಸಲು ೩೭ಗುಂಟೆ ಜಾಗವನ್ನು ಸಂಸ್ಥೆಗೆ ನೀಡಲಾಗಿದೆ. ಮುೂರು ವಸತಿ ಗೃಹದ ಹತ್ತಿರ ನಿಲ್ದಾಣಕ್ಕೆ ನೀಡಲಾಗಿರುವ ಜಾಗದ ಸುತ್ತ ಕಾಂಪೌಂಡ್ ನಿರ್ಮಿಸುವ ಕಾರ್ಯ ಸಾಗಿದೆ. ಚಾ.ನಗರ ಹಿಂದುಳಿದ ಜಿಲ್ಲೆ ಪಟ್ಟಿಯಲ್ಲಿರುವುದರಿಂದ ವಿಶೇಷ ಅಭಿವೃದ್ಧಿ ನಿಧಿ(ಎಸ್‌ಡಿಎಫ್) ಅನುದಾನ ತಂದು ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ವಿಭಾಗೀಯ ನಿುಂಂತ್ರಣಾಧಿಕಾರಿ ಶ್ರೀನಿವಾಸ್ ವಾಹಿತಿ ನೀಡಿದರು.

ಈ ತಾಲ್ಲೂಕುಗಳಲ್ಲಿ ಬಸ್ ಡಿಪೋ…

ಪ್ರತಿ ತಾಲ್ಲೂಕಿನಲ್ಲೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಇರಬೇಕಂತಿದೆ. ಈ ಉದ್ದೇಶ ಸಾಕಾರಗೊಳಿಸಲು ಹನೂರು ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಡಿಪೋಗೆ ಕನಿಷ್ಠ ೩ಎಕರೆ ಜಾಗ ನೀಡುವಂತೆ ತಾಲ್ಲೂಕು ಆಡಳಿತಕ್ಕೆ ಸಾರಿಗೆ ಸಂಸ್ಥೆ ಮನವಿ ವಾಡಿದೆ.

ಡಿಪೋ ನಿರ್ವಾಣ ಆದರೆ ಕನಿಷ್ಠ ೬೦ರಿಂದ ೮೦ಬಸ್‌ಗಳು ಆ ತಾಲ್ಲೂಕಿಗೆ ಸೀಮಿತವಾಗಿ ನಿಲ್ಲುತ್ತವೆ. ತಾಂತ್ರಿಕ ಸಿಬ್ಬಂದಿ, ಚಾಲಕರು, ನಿರ್ವಾಹಕರು ಎಲ್ಲರೂ ಸ್ಥಳೀಯವಾಗಿಯೇ ಇರುತ್ತಾರೆ. ಕುಗ್ರಾಮಕ್ಕೂ ಉತ್ತಮ ಸೇವೆಯನ್ನು ಬೆಳಗಿನ ಜಾವವೇ ಒದಗಿಸಲು ಸಾಧ್ಯವಾಗುತ್ತದೆ. ಬಸ್ ಕೆಟ್ಟರೆ ಬದಲಿ ವ್ಯವಸ್ಥೆುಂನ್ನು ಕೂಡಲೇ ವಾಡಲು ಅನುಕೂಲವಾಗುತ್ತದೆ. ಯಳಂದೂರು ಪರಿಮಿತಿುಂಲ್ಲಿ ಜಾಗದ ಕೊರತೆಯಾದರೆ ಸಂತೇಮರಹಳ್ಳಿಯಲ್ಲಿಯಾದರೂ ನೀಡುವಂತೆ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿರುವ ಪತ್ರದಲ್ಲಿ ಕೋರಲಾಗಿದೆ. ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲದಲ್ಲಿ ಈಗಾಗಲೇ ಬಸ್ ಡಿಪೋಗಳಿವೆ.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago