ಹನೂರು: ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ ಸಂಘರ್ಷ ತಡೆಗೆ ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು 157 ಕೋಟಿ ರೂ. ಹೆಚ್ಚುವರಿಯಾಗಿ ನೀಡಲು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಇಲಾಖೆ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 88 ಕಿ.ಮೀ. ರೈಲ್ವೆ ಬ್ಯಾರಿಕೇಡ್, 53 ಕಿ.ಮೀ. ಆನೆ ಕಂದಕ, 50 ಕಿ.ಮೀ. ಸೌರ ತೂಗು ಬೇಲಿ (ಸೋಲಾರ್ ಟೆಂಟಕಲ್ ಫೆನ್ಸಿಂಗ್) ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮಂಜೂರು ಮಾಡಲಾಗಿದೆ ಎಂದರು.
ಮಾನವ ವನ್ಯಜೀವಿ ಅದರಲ್ಲೂ ಆನೆಗಳಿಂದ ಬೆಳೆಹಾನಿ, ಜೀವಹಾನಿ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಮತ್ತು ವನ್ಯಜೀವಿಗಳುವ ಸಾವಿಗೀಡಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಕೂಡಲೇ ಈ ಬಗ್ಗೆ ನಿಗಾ ಇಟ್ಟು, ಕಚ್ಚಾ ಬಾಂಬ್ ಇಡುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…