ಚಾಮರಾಜನಗರ

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಬಂದಿದ್ದ ಭಕ್ತಾದಿಗಳ ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹವಾಗಿದೆ

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 16 ರಿಂದ 19 ರವರೆಗೆ ಜರುಗಲಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ ಭಕ್ತಾದಿಗಳು ಹಾಗೂ ಎರಡನೇ ಶನಿವಾರ ಭಾನುವಾರ ಇದ್ದ ಹಿನ್ನೆಲೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ ಹಿನ್ನೆಲೆ ಎರಡು ದಿನಗಳ ಅವಧಿಯಲ್ಲಿ 1.38 ಲಕ್ಷ ಲಾಡು ಮಾರಾಟವಾಗಿದೆ. ಪ್ರತಿ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಮೂರು ಲಕ್ಷ ಲಾಡು, ಮಾರಾಟವಾಗುತ್ತಿತ್ತು ಆದರೆ ಈ ಬಾರಿ ಜಾತ್ರೆಗೆ ಮುನ್ನವೇ 1.38 ಲಕ್ಷ ಮಾರಾಟವಾಗಿರುವುದು ಇದೇ ಮೊದಲು ಎಂದು ತಿಳಿದು ಬಂದಿದೆ. ಫೆಬ್ರವರಿ 14ರಂದು 70 ಸಾವಿರ ಫೆಬ್ರವರಿ 15ರಂದು 68 ಸಾವಿರ ಲಾಡು ಮಾರಾಟವಾಗಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಲಾಡು ತಯಾರಿಕೆ ಮಾಡಲಾಗುತ್ತಿದ್ದು ಭಾನುವಾರ ಹಾಗೂ ಸೋಮವಾರ ಎಪ್ಪತ್ತು ಸಾವಿರ ಲಾಡು ತಯಾರಿಕೆ ಮಾಡಲಾಗಿದೆ ಈ ಪೈಕಿ ಈಗಾಗಲೇ ರೂ.30 ಸಾವಿರ ಲಾಡು ಮಾರಾಟವಾಗಿದ್ದು ಒಂದು ಪಾಯಿಂಟ್ 1.10 ಸಾವಿರ ಲಾಡು ಶೇಖರಣೆ ಮಾಡಲಾಗಿದೆ.

ವಿವಿಧ ಉತ್ಸವಗಳಿಂದ 24 ಲಕ್ಷ ಆದಾಯ : ಸರ್ಕಾರಿ ರಜಾ ದಿನ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಮನೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಭಕ್ತಾದಿಗಳು ಹರೆಕೆ ರೂಪದಲ್ಲಿ ಬಂಗಾರದ ರಥೋತ್ಸವ 665, ಬಳ್ಳಿ ರಥೋತ್ಸವ 40 ಹೋಲಿವಾಹನ 359 ಬಸವ ವಾಹನ 715 ರುದ್ರಾಕ್ಷಿ ವಾಹನ 123 ಈ ಉತ್ಸವಗಳಿಂದ 24, 34,8005 ಆದಾಯ ಬಂದಿದೆ.

ಈ ಪೈಕಿ ಬಂಗಾರದ ರಥೋತ್ಸವದಿಂದ 19,95,665, ಬೆಳ್ಳಿ ರಥೋತ್ಸವ 80,040 ಹುಲಿ ವಾಹನ 1,07,700,ಬಸವ ವಾಹನ 2,14,500 ರುದ್ರಾಕ್ಷಿ ವಾಹನ 36900 ಒಟ್ಟಾರೆ 24 ಲಕ್ಷ ಆದಾಯ ಬಂದಿದೆ.

ಉಳಿದಂತೆ ಮಾಹಿತಿ ಕೇಂದ್ರ, ಲಾಡು ಮಾರಾಟ, ತೀರ್ಥ ಪ್ರಸಾದ, ಕಲ್ಲು ಸಕ್ಕರೆ ಬ್ಯಾಗ್, ಅಕ್ಕಿ ಸೇವೆ, ಪುದುವಟ್ಟು ವಿಶೇಷ ಪ್ರವೇಶ ಶುಲ್ಕ, ಜನ ವಾಹನ, ನೆಗದು ಕಾಣಿಕೆ ಇತರೆ ಸೇವೆಗಳಿಂದ 1,14 ಕೋಟಿ ಆದಾಯ ಸಂಗ್ರಹವಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago