ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಬಂದಿದ್ದ ಭಕ್ತಾದಿಗಳ ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹವಾಗಿದೆ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 16 ರಿಂದ 19 ರವರೆಗೆ ಜರುಗಲಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ ಭಕ್ತಾದಿಗಳು ಹಾಗೂ ಎರಡನೇ ಶನಿವಾರ ಭಾನುವಾರ ಇದ್ದ ಹಿನ್ನೆಲೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ ಹಿನ್ನೆಲೆ ಎರಡು ದಿನಗಳ ಅವಧಿಯಲ್ಲಿ 1.38 ಲಕ್ಷ ಲಾಡು ಮಾರಾಟವಾಗಿದೆ. ಪ್ರತಿ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಮೂರು ಲಕ್ಷ ಲಾಡು, ಮಾರಾಟವಾಗುತ್ತಿತ್ತು ಆದರೆ ಈ ಬಾರಿ ಜಾತ್ರೆಗೆ ಮುನ್ನವೇ 1.38 ಲಕ್ಷ ಮಾರಾಟವಾಗಿರುವುದು ಇದೇ ಮೊದಲು ಎಂದು ತಿಳಿದು ಬಂದಿದೆ. ಫೆಬ್ರವರಿ 14ರಂದು 70 ಸಾವಿರ ಫೆಬ್ರವರಿ 15ರಂದು 68 ಸಾವಿರ ಲಾಡು ಮಾರಾಟವಾಗಿದೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಲಾಡು ತಯಾರಿಕೆ ಮಾಡಲಾಗುತ್ತಿದ್ದು ಭಾನುವಾರ ಹಾಗೂ ಸೋಮವಾರ ಎಪ್ಪತ್ತು ಸಾವಿರ ಲಾಡು ತಯಾರಿಕೆ ಮಾಡಲಾಗಿದೆ ಈ ಪೈಕಿ ಈಗಾಗಲೇ ರೂ.30 ಸಾವಿರ ಲಾಡು ಮಾರಾಟವಾಗಿದ್ದು ಒಂದು ಪಾಯಿಂಟ್ 1.10 ಸಾವಿರ ಲಾಡು ಶೇಖರಣೆ ಮಾಡಲಾಗಿದೆ.
ವಿವಿಧ ಉತ್ಸವಗಳಿಂದ 24 ಲಕ್ಷ ಆದಾಯ : ಸರ್ಕಾರಿ ರಜಾ ದಿನ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಮನೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಭಕ್ತಾದಿಗಳು ಹರೆಕೆ ರೂಪದಲ್ಲಿ ಬಂಗಾರದ ರಥೋತ್ಸವ 665, ಬಳ್ಳಿ ರಥೋತ್ಸವ 40 ಹೋಲಿವಾಹನ 359 ಬಸವ ವಾಹನ 715 ರುದ್ರಾಕ್ಷಿ ವಾಹನ 123 ಈ ಉತ್ಸವಗಳಿಂದ 24, 34,8005 ಆದಾಯ ಬಂದಿದೆ.
ಈ ಪೈಕಿ ಬಂಗಾರದ ರಥೋತ್ಸವದಿಂದ 19,95,665, ಬೆಳ್ಳಿ ರಥೋತ್ಸವ 80,040 ಹುಲಿ ವಾಹನ 1,07,700,ಬಸವ ವಾಹನ 2,14,500 ರುದ್ರಾಕ್ಷಿ ವಾಹನ 36900 ಒಟ್ಟಾರೆ 24 ಲಕ್ಷ ಆದಾಯ ಬಂದಿದೆ.
ಉಳಿದಂತೆ ಮಾಹಿತಿ ಕೇಂದ್ರ, ಲಾಡು ಮಾರಾಟ, ತೀರ್ಥ ಪ್ರಸಾದ, ಕಲ್ಲು ಸಕ್ಕರೆ ಬ್ಯಾಗ್, ಅಕ್ಕಿ ಸೇವೆ, ಪುದುವಟ್ಟು ವಿಶೇಷ ಪ್ರವೇಶ ಶುಲ್ಕ, ಜನ ವಾಹನ, ನೆಗದು ಕಾಣಿಕೆ ಇತರೆ ಸೇವೆಗಳಿಂದ 1,14 ಕೋಟಿ ಆದಾಯ ಸಂಗ್ರಹವಾಗಿದೆ.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…